ಜಮೀರ್ ಅಹ್ಮದ್ ಖಾನ್ 
ರಾಜ್ಯ

ವಕ್ಫ್ ಆಸ್ತಿಗಳ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಬಾಕಿ ಉಳಿದಿರುವ 190 ಆಸ್ತಿಗಳ ಪೈಕಿ 100 ಆಸ್ತಿಗಳಿಗೆ ಖಾತ ಹಸ್ತಾಂತರಿಸಲಾಯಿತು.

ಧಾರವಾಡ: ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹುಬ್ಬಳ್ಳಿ-ಧಾರವಾಡದಲ್ಲಿ ವಕ್ಫ್ ಆಸ್ತಿಗಳಿಗೆ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ್ದಾರೆ.

ಸೋಮವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ವಕ್ಫ್ ಆಸ್ತಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಸಚಿವರು, ಅಧಿಕಾರಿಗಳು ಒತ್ತುವರಿ ತಡೆಗೆ ಕ್ರಮಕೈಗೊಂಡು ಈ ಆಸ್ತಿಗಳ ರಕ್ಷಣೆಗೆ ಮುಂದಾಗಬೇಕು ಎಂದರು.

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಬಾಕಿ ಉಳಿದಿರುವ 190 ಆಸ್ತಿಗಳ ಪೈಕಿ 100 ಆಸ್ತಿಗಳಿಗೆ ಖಾತ ಹಸ್ತಾಂತರಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ತಗಾದೆ ಇರುವ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ, ಹದಿನೈದು ದಿನಗಳಲ್ಲಿ ಅರಣ್ಯ ಸಚಿವರ ಜತೆ ಈ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು.

ಈ ಆಸ್ತಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನಗರಸಭೆ, ಕಂದಾಯ, ಜಿಲ್ಲಾ ಪಂಚಾಯಿತಿ, ನಗರಾಭಿವೃದ್ಧಿ ಮುಂತಾದ ಸಂಬಂಧಿತ ಇಲಾಖೆಗಳೊಂದಿಗೆ ನಿರಂತರ ಸಂವಹನ ನಡೆಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಎರಡೂ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್‌ಗೆ ಸಲ್ಲಿಕೆಯಾಗಿರುವ ಮನವಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಎಂಎಲ್ಸಿ ಅಬ್ದುಲ್ ಜಬ್ಬಾರ್, ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್ ಬಾಷಾ, ಶಾಸಕರಾದ ಕೋನರೆಡ್ಡಿ, ಅರವಿಂದ್ ಬೆಲ್ಲದ್, ಜಿಲ್ಲಾಧಿಕಾರಿಗಳಾದ ದಿವ್ಯಪ್ರಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕಿ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT