ರಾಜ್ಯ

'ನನ್ನ ತಂಟೆಗೆ ಬಂದ್ರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡ್ತೀನಿ': ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ವಿರುದ್ಧ ಹಾಲಿ ಶಾಸಕ ರಾಜು ಕಾಗೆ ವಾಗ್ದಾಳಿ

ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.

ಚಿಕ್ಕೋಡಿ: ಮಾತಿನ ವೇಗದಲ್ಲಿ ರಾಜಕೀಯ ನಾಯಕರು ಕೆಲವೊಮ್ಮೆ ಸಾರ್ವಜನಿಕ ವೇದಿಕೆಗಳಲ್ಲಿ ಭಾಷಣ ಮಾಡುವಾಗ ಮಿತಿಯನ್ನು ದಾಟಿ ಹೋಗುತ್ತಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ರಾಜು ಕಾಗೆ, ನನ್ನ ಬಗ್ಗೆ ಮಾತನಾಡಲು ನಿನಗೆ ಯೋಗ್ಯತೆ ಇಲ್ಲ. ನೀನು ನನ್ನ ಬಗ್ಗೆ ಮಾತನಾಡ ಬೇಡ, ಅಪ್ಪಿ-ತಪ್ಪಿ ಮಾತನಾಡಿದರೆ ನಾನು ನಿನ್ನ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ ಎಂದು ಏಕವಚನದಲ್ಲಿ ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೀನು ಬಹಳ ಸತ್ಯ ಹರಿಶ್ಚಂದ್ರ ತರಹ ಮಾತನಾಡುತ್ತಿದ್ದೀಯಾ. ನಿಮ್ಮ ಕಾರ್ಖಾನೆಯಲ್ಲಿ ಕಾಟಾ ಯಾರು ಹೊಡೆದ್ರಿ? ಕಾರ್ಮಿಕರ ದುಡ್ಡಿನಲ್ಲಿ ಹುಟ್ಟುಹಬ್ಬ ಆಚರಿಸಿದವರು ಯಾರು ಎಂದೆಲ್ಲ ಶಾಸಕ ರಾಜು ಕಾಗೆ ಪ್ರಶ್ನಿಸಿದ್ದಾರೆ.

ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT