ಸಾರ್ವಜನಿಕ ಗಣೇಶ ಉತ್ಸವ  
ರಾಜ್ಯ

ಗಣೇಶ ಪೆಂಡಾಲ್, ಗಣೇಶೋತ್ಸವಗಳಲ್ಲಿ ಪ್ರಸಾದ ವಿನಿಯೋಗ: FSSAI ನಿಂದ ಆದೇಶ

ಗಣೇಶೋತ್ಸವ ವೇಳೆ ಪ್ರಸಾದ ವಿನಿಯೋಗ ಇದ್ದರೆ ಅಲ್ಲಿ ಶುಚಿತ್ವ ಮತ್ತು ಗುಣಮಟ್ಟ ಸುರಕ್ಷತೆ ಪತ್ರ ಕಡ್ಡಾಯ ಹಾಗೆ ಬಿಬಿಎಂಪಿ ಅನುಮತಿ ಜೊತೆಗೆ ಆಹಾರ ವಿತರಣೆಗೂ ಅನುಮತಿ ಪತ್ರ ಇರಲೇಬೇಕಿದೆ.

ಬೆಂಗಳೂರು : ಗಣಪತಿ ಉತ್ಸವಕ್ಕೆ ಇನ್ನೇನು ಮೂರೇ ದಿನ ಬಾಕಿ ಹಿನ್ನೆಲೆಯಲ್ಲಿ ಉತ್ಸವ ಮಾಡುವ ಆಯೋಜಕರಿಗೆ ಎಚ್ಚರಿಕೆ ಕೊಟ್ಟ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ FSSAI ಈ ಬಗ್ಗೆ ಬಿಬಿಎಂಪಿಗೆ ಪತ್ರ ಬರೆದಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳು, ಸಾರ್ವಜನಿಕ ಗಣೇಶೋತ್ಸವಗಳಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಫ್ ಎಸ್ ಎಸ್ ಎಐ ಪರವಾನಗಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಮಾತ್ರ ಪ್ರಸಾದ ಸಿದ್ಧಪಡಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶಿಸಿದೆ.

ಗಣೇಶೋತ್ಸವ ವೇಳೆ ಪ್ರಸಾದ ವಿನಿಯೋಗ ಇದ್ದರೆ ಅಲ್ಲಿ ಶುಚಿತ್ವ ಮತ್ತು ಗುಣಮಟ್ಟ ಸುರಕ್ಷತೆ ಪತ್ರ ಕಡ್ಡಾಯ ಹಾಗೆ ಬಿಬಿಎಂಪಿ ಅನುಮತಿ ಜೊತೆಗೆ ಆಹಾರ ವಿತರಣೆಗೂ ಅನುಮತಿ ಪತ್ರ ಇರಲೇಬೇಕಿದೆ. ಗಣಪತಿ ಉತ್ಸವದ ವೇಳೆ ಪ್ರಸಾದ, ಆಹಾರ ಪದಾರ್ಥಗಳು ವಿತರಣೆ ಮಾಡುವವರು ಪರವಾನಗಿ ಇದೆಯೇ ಎಂಬುದನ್ನು ಪರಿಶೀಲಿಸಲು ಸೂಚನೆ ನೀಡಲಾಗಿದೆ.

ಜನರ ಆರೋಗ್ಯ ದೃಷ್ಟಿಯಿಂದ ಪಾಲಿಕೆಗೆ ಪತ್ರದ ಮೂಲಕ ಸಂದೇಶ ಹಾಗೆ ಎಫ್ ಎಸ್ ಎಸ್ ಎಐನಿಂದ ಅನುಮತಿ ಪಡೆಯದೇ ಇದ್ದವರು ಆಹಾರ ನೀಡಿದರೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ಅನುಮತಿ ಕಡ್ಡಾಯ ಎಂದು ಸ್ಪಷ್ಟಪಡಿಸಿರುವ ನಗರ ಪೊಲೀಸರು, ಬಲವಂತವಾಗಿ ವಂತಿಗೆ ಸ್ವೀಕರಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

India-US ಮಧ್ಯಂತರ ವ್ಯಾಪಾರ ಒಪ್ಪಂದ; ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು

ಬರಾಕ್‌ ಒಬಾಮಾ ದಂಪತಿಗಳ ಕೋತಿಗೆ ಹೋಲಿಸಿದ ಟ್ರಂಪ್‌; ಆಕ್ರೋಶ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌, ಕ್ಷಮೆಯಾಚನೆಗೆ ನಕಾರ

ದಾಖಲೆಯ 6ನೇ ಬಾರಿಗೆ U19 World Cup ಗೆದ್ದ ಭಾರತೀಯ ಯುವ ಪಡೆ

SCROLL FOR NEXT