ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ 
ರಾಜ್ಯ

ಮಡಿಕೇರಿ: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಕಿದೆ ಶಾಶ್ವತ ವಿದ್ಯುತ್ ಸಂಪರ್ಕ

ಹಲವು ಗ್ರಾಮೀಣ ರೋಗಿಗಳು ಈ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಆದರೆ, ಸರಿಯಾದ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಹಲವಾರು ಪರೀಕ್ಷೆಗಳನ್ನು ಮಾಡಿಸಲಾಗುತ್ತಿದೆ.

ಮಡಿಕೇರಿ: ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಶ್ವತ ವಿದ್ಯುತ್ ಸಂಪರ್ಕ ಇಲ್ಲದಿರುವುದು ಸುಗಮ ಕಾರ್ಯಕ್ಕೆ ಅಡ್ಡಿಯಾಗಿದೆ. ಸಮಸ್ಯೆ ನಿವಾರಣೆಗೆ ಟೆಂಡರ್ ಪ್ರಕ್ರಿಯೆ ಆರಂಭಿಸುವ ಸಾಧ್ಯತೆಯಿದ್ದು, ಇದಕ್ಕೆ ಲಕ್ಷಕ್ಕೂ ಹೆಚ್ಚು ಹಣದ ಅಗತ್ಯವಿದೆ.

ನೆಲ್ಲಿಹುದಿಕೇರಿ, ಸಿದ್ದಾಪುರ ಸೇರಿದಂತೆ ಗ್ರಾಮಾಂತರ ಭಾಗಗಳಿಂದ ನಿತ್ಯ ನೂರಾರು ರೋಗಿಗಳು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸುತ್ತಾರೆ. ಆದರೆ ಸರಿಯಾದ ವಿದ್ಯುತ್ ಸಂಪರ್ಕ ಇಲ್ಲದೆ ರೋಗಿಗಳಿಗೆ ಸುಧಾರಿತ ಚಿಕಿತ್ಸೆಗಳನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಹಲವು ಗ್ರಾಮೀಣ ರೋಗಿಗಳು ಈ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಆದರೆ, ಸರಿಯಾದ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಹಲವಾರು ಪರೀಕ್ಷೆಗಳನ್ನು ಮಾಡಿಸಲಾಗುತ್ತಿದ್ದು, ಬಡ ರೋಗಿಗಳು ಅದನ್ನು ಭರಿಸಲಾಗದೆ ಪರದಾಡುತ್ತಿದ್ದಾರೆ ಎಂದು ಸಿದ್ದಾಪುರ ನಿವಾಸಿ ಮುಸ್ತಫಾ ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯೋಗಾಲಯದಲ್ಲಿ ಎಕ್ಸ್-ರೇ ಸೌಲಭ್ಯವೂ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಈಗ ಒಂದು ತಿಂಗಳಿನಿಂದ ಪರಿಸ್ಥಿತಿ ಹೀಗೇ ಇದೆ ಎಂದು ಅವರು ಹೇಳಿದ್ದಾರೆ.

ಈ ವಿಚಾರವಾಗಿ ವಿರಾಜಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಯತಿರಾಜ್‌ ಅವರನ್ನು ಪ್ರಶ್ನಿಸಿದಾಗ, ಕೇಂದ್ರದಲ್ಲಿ ಎಚ್‌ಬಿ, ಬ್ಲಡ್‌ ಗ್ರೂಪ್‌ ಸೇರಿದಂತೆ ಕೆಲವು ಮೂಲ ಪರೀಕ್ಷೆಗಳು ನಡೆಯುತ್ತಿವೆ. ಇಡೀ ಕಟ್ಟಡಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕವಿದೆ. ಅದನ್ನು ಬದಲಿಸಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು ಎಂದಿದ್ದಾರೆ.

ಆದಾಗ್ಯೂ, ಪ್ರಯೋಗಾಲಯದಲ್ಲಿ ಮೂಲಭೂತ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಭಾರೀ ಉಪಕರಣಗಳನ್ನು ಬಳಸಿ ಮಾಡುವ ಪರೀಕ್ಷೆಗಳನ್ನು ಮಾತ್ರ ಇತರ ಆಸ್ಪತ್ರೆಗಳಿಗೆ ಉಲ್ಲೇಖಿಸಲಾಗುತ್ತಿದೆ ಎಂದು ಎಂದು ಡಾ.ಯತಿರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT