ಥಾವರಚಂದ್ ಗೆಹ್ಲೋಟ್-ದ್ರೌಪದಿ ಮುರ್ಮು-ಸಿದ್ದರಾಮಯ್ಯ 
ರಾಜ್ಯ

ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ: ರಾಷ್ಟ್ರಪತಿ ಅಂಗಳಕ್ಕೆ ಮುಡಾ ಪ್ರಕರಣ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಮುಡಾ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಹೀಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ.

ಬೆಂಗಳೂರು: ಮುಡಾ ಹಗರಣ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಸಾಕಷ್ಟು ಸಂಕಷ್ಟ ತಂದಿಟ್ಟಿದೆ. ಇನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದರ ಮಧ್ಯ ಇದೀಗ ಮುಡಾ ಹಗರಣ ರಾಷ್ಟ್ರಪತಿ ಅಂಗಳ ತಲುಪಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಮುಡಾ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಹೀಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗುಪ್ತಚರ ಇಲಾಖೆ‌ ಸಲಹೆಯಂತೆ ಬುಲೆಟ್‌ಪ್ರೂಫ್ ಕಾರು ಬಳಕೆ ಮಾಡುತ್ತಿದ್ದೇನೆ. ಕೆಲ ಸಚಿವರು ಉದ್ದೇಶಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂಬ ಅಂಶಗಳ ಸಂಕ್ಷೀಪ್ತ ವರದಿಯನ್ನು ಗೆಹ್ಲೋಟ್ ಅವರು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹಸಚಿವಾಲಯಕ್ಕೆ ರವಾನಿಸಿದ್ದಾರೆ.

ಮುಡಾ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆಯುವಂತೆ ಪ್ರತಿಭಟನೆಗಳ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹೇರುತ್ತಿದೆ. ಮಾಜಿ ಬಾಂಗ್ಲಾ ಪ್ರಧಾನಿಗೆ ಬಂದಂತಹ ಪರಿಸ್ಥಿತಿ ರಾಜ್ಯಪಾಲರಿಗೂ ಬರುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ, ತಮ್ಮ ಪ್ರತಿಕೃತಿ ದಹನ ಮಾಡಲಾಗಿದೆ ಎಂದು ವರದಿಯಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT