ಪವಿತ್ರಾ ಗೌಡ ಬಂಧನದ ನಂತರದ ದೃಶ್ಯ  
ರಾಜ್ಯ

'ರೇಣುಕಾಸ್ವಾಮಿ ಹತ್ಯೆಗೆ ಮೂಲ ಕಾರಣ ಪವಿತ್ರಾ ಗೌಡ': ಕೋರ್ಟ್ ಹೇಳಿದ್ದೇನು?

ಡಿಎನ್ ಎ ವರದಿಯಲ್ಲಿ ರೇಣುಕಾಸ್ವಾಮಿಯ ರಕ್ತದ ಮಾದರಿಯ ಮತ್ತು ಕೊಲೆ ಆರೋಪಿ ಪವಿತ್ರಾ ಗೌಡಳ ಬಟ್ಟೆ ಹಾಗೂ ಚಪ್ಪಲಿಯಲ್ಲಿದ್ದ ರಕ್ತದ ಕಲೆಯ ಮಾದರಿಗಳು ಹೊಂದಿಕೆಯಾಗುತ್ತಿದ್ದು ಆಕೆ ಕೂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾಳೆ.

ಬೆಂಗಳೂರು: ಸೂಕ್ತ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳು ಸಲ್ಲಿಕೆಯಾದ ನಂತರ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮುಖ್ಯ ಕಾರಣ ನಟಿ ಹಾಗೂ ಫ್ಯಾಶನ್ ಡಿಸೈನರ್ ಪವಿತ್ರಾ ಗೌಡಳೇ ಮೂಲ ಕಾರಣ ಎಂದು ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಹೇಳಿದೆ.

ರೇಣುಕಾಸ್ವಾಮಿಯನ್ನು ಊಹಿಸಲು ಸಾಧ್ಯವಾಗದ ರೀತಿಯಲ್ಲಿ ಬರ್ಭರವಾಗಿ ಹಿಂಸೆ ನೀಡಿ ಹತ್ಯೆ ಮಾಡಲಾಗಿದೆ ಎಂದು ಹೇಳಿರುವ ಕೋರ್ಟ್, ಈ ಕೃತ್ಯವು ಅತ್ಯಂತ ಭಯಾನಕ ಮತ್ತು ಹೇಯವಾಗಿದೆ ಎಂದು ತೀರ್ಮಾನಕ್ಕೆ ಬಂದಿದೆ.

ಡಿಎನ್ ಎ ವರದಿಯಲ್ಲಿ ಏನಿದೆ?: ಪ್ರಕರಣ ಕುರಿತು ಪೊಲೀಸರು ಸಲ್ಲಿಸಿರುವ ಡಿಎನ್ ಎ ವರದಿಯಲ್ಲಿ ರೇಣುಕಾಸ್ವಾಮಿಯ ರಕ್ತದ ಮಾದರಿಯ ಮತ್ತು ಕೊಲೆ ಆರೋಪಿ ಪವಿತ್ರಾ ಗೌಡಳ ಬಟ್ಟೆ ಹಾಗೂ ಚಪ್ಪಲಿಯಲ್ಲಿದ್ದ ರಕ್ತದ ಕಲೆಯ ಮಾದರಿಗಳು ಹೊಂದಿಕೆಯಾಗುತ್ತಿದ್ದು ಆಕೆ ಕೂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾಳೆ. ರೇಣುಕಾಸ್ವಾಮಿ ತನ್ನ ಇನ್ಸ್ಟಾಗ್ರಾಂ ಅಕೌಂಟ್ ನಿಂದ ನಗ್ನ ಚಿತ್ರಗಳನ್ನು ಆಕೆಗೆ ಕಳುಹಿಸಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಈ ಹೇಳಿಕೆಗಳನ್ನಿಟ್ಟುಕೊಂಡು, ಚಾರ್ಜ್ ಶೀಟ್ ಸಲ್ಲಿಕೆಗೂ ಮುನ್ನವೇ ಜಾಮೀನಿಗೆ ಅರ್ಜಿ ಹಾಕಿದ್ದ ಪವಿತ್ರಾ ಗೌಡಗೆ ಆಗಸ್ಟ್ 31ರಂದು ಜಾಮೀನು ನೀಡಲು ನಿರಾಕರಿಸಿದ್ದ 56ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಜೈಶಂಕರ್, ಈ ಹೀನ ಅಪರಾಧ ಕೃತ್ಯದಲ್ಲಿ ಪವಿತ್ರಾ ಗೌಡ ಪಿತೂರಿ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಇದೊಂದು ಅತ್ಯಂತ ಭೀಭತ್ಸ ಮತ್ತು ಹೇಯ ಕೃತ್ಯವಾಗಿದೆ.

ಡಿಎನ್ ಎ ವರದಿಯಲ್ಲಿ ಏನಿದೆ?: ಪ್ರಕರಣ ಕುರಿತು ಪೊಲೀಸರು ಸಲ್ಲಿಸಿರುವ ಡಿಎನ್ ಎ ವರದಿಯಲ್ಲಿ ರೇಣುಕಾಸ್ವಾಮಿಯ ರಕ್ತದ ಮಾದರಿಯ ಮತ್ತು ಕೊಲೆ ಆರೋಪಿ ಪವಿತ್ರಾ ಗೌಡಳ ಬಟ್ಟೆ ಹಾಗೂ ಚಪ್ಪಲಿಯಲ್ಲಿದ್ದ ರಕ್ತದ ಕಲೆಯ ಮಾದರಿಗಳು ಹೊಂದಿಕೆಯಾಗುತ್ತಿದ್ದು ಆಕೆ ಕೂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾಳೆ. ರೇಣುಕಾಸ್ವಾಮಿ ತನ್ನ ಇನ್ಸ್ಟಾಗ್ರಾಂ ಅಕೌಂಟ್ ನಿಂದ ನಗ್ನ ಚಿತ್ರಗಳನ್ನು ಆಕೆಗೆ ಕಳುಹಿಸಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಈ ಹೇಳಿಕೆಗಳನ್ನಿಟ್ಟುಕೊಂಡು, ಚಾರ್ಜ್ ಶೀಟ್ ಸಲ್ಲಿಕೆಗೂ ಮುನ್ನವೇ ಜಾಮೀನಿಗೆ ಅರ್ಜಿ ಹಾಕಿದ್ದ ಪವಿತ್ರಾ ಗೌಡಗೆ ಆಗಸ್ಟ್ 31ರಂದು ಜಾಮೀನು ನೀಡಲು ನಿರಾಕರಿಸಿದ್ದ 56ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಜೈಶಂಕರ್, ಈ ಹೀನ ಅಪರಾಧ ಕೃತ್ಯದಲ್ಲಿ ಪವಿತ್ರಾ ಗೌಡ ಪಿತೂರಿ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಇದೊಂದು ಅತ್ಯಂತ ಭೀಭತ್ಸ ಮತ್ತು ಹೇಯ ಕೃತ್ಯವಾಗಿದೆ.

ಮರಣೋತ್ತರ ವರದಿ: ಇನ್ನು ರೇಣುಕಾಸ್ವಾಮಿ ಮರಣೋತ್ತರ ವರದಿಯನ್ನು ಉಲ್ಲೇಖಿಸಿರುವ ಕೋರ್ಟ್, ಮೃತ ವ್ಯಕ್ತಿಯ ಮೇಲೆ 39 ಗಾಯಗಳಾಗಿದ್ದವು. ಆತನ ಎದೆಯ ಮೂಳೆ ಮುರಿದಿತ್ತು. ತಲೆಗೆ ಗಂಭೀರ ಗಾಯವಾಗಿ ಸಾಕಷ್ಟು ರಕ್ತಸ್ರಾವವಾಗಿತ್ತು. ವೃಷಣಗಳು ಹಾನಿಗೀಡಾಗಿದ್ದು, ವಿದ್ಯುತ್ ನಿಂದ ಶಾಕ್ ಕೊಡಲಾಗಿತ್ತು. ಪೊಲೀಸರು ಸಲ್ಲಿಸಿರುವ ಫೋಟೋಗಳಲ್ಲಿ ಮೃತದ ದೇಹದ ಬಹುತೇಕ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ. ಕೆಲವು ಗಾಯಗಳು ಗಂಭೀರವಾಗಿವೆ. ಅಂದರೆ ವ್ಯಕ್ತಿಗೆ ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಕೋರ್ಟ್ ಹೇಳಿದೆ.

ಪ್ರಕರಣ ಕುರಿತು ಕೂಲಂಕಷವಾಗಿ ಮತ್ತು ವಿವರವಾಗಿ ತನಿಖೆ ನಡೆಸಲಾಗಿದ್ದು, ಆರೋಪಿಗಳ ಕರೆ ವಿವರಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸ್ಥಳದ ವಿವರಗಳನ್ನು ಸಹ ಸಂಗ್ರಹಿಸಲಾಗಿದೆ. ಇಬ್ಬರು ಪ್ರತ್ಯಕ್ಷ ದರ್ಶಿಗಳ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಮತ್ತು ಅವುಗಳನ್ನು ಕಲೆಹಾಕಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ. ಮೊಬೈಲ್ ಕರೆಗಳ ವಿವರಗಳನ್ನು ನೋಡಿದಾಗ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಒಬ್ಬರಿಗೊಬ್ಬರು ಹತ್ಯೆ ಮಾಡುವ ಮುನ್ನ ನಿರಂತರವಾಗಿ ಸಂಪರ್ಕದಲ್ಲಿದ್ದರು. ಅಪರಾಧ ನಡೆಸಲು ಅವರು ನಡೆಸಿದ ಪೂರ್ವ ಯೋಜನೆ ಮತ್ತು ಕ್ರೈಂ ನಡೆದ ಸ್ಥಳದಲ್ಲಿ ಅವರ ಇರುವಿಕೆ ಎಲ್ಲವೂ ಸಾಬೀತಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ ಪ್ರಸನ್ನ ಕುಮಾರ್ ಸಲ್ಲಿಸಿರುವ ತನಿಖಾ ದಾಖಲೆಗಳ ಪತ್ರಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಅರ್ಜಿದಾರ ಹಾಗೂ ಆರೋಪಿ ನಂಬರ್ 3 ಇತರ ಆರೋಪಿಗಳ ಜೊತೆಯಲ್ಲಿ ಪಿತೂರಿ ನಡೆಸಿ ರೇಣುಕಾಸ್ವಾಮಿಯನ್ನು ಅಪಹರಿಸಿ ತಂದಿದ್ದನು ಎಂದು ಹೇಳಲಾಗಿದೆ.

ಚಿತ್ರದುರ್ಗದ ಅನುಕುಮಾರ್ ಗೆ ಜಾಮೀನು ನೀಡಲು ನಿರಾಕರಿಸಿರುವ ನ್ಯಾಯಾಲಯ ಈತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ತಂದು ಹಲ್ಲೆ ಮಾಡುವಲ್ಲಿ ನೆರವಾಗಿದ್ದನು. ರೇಣುಕಾಸ್ವಾಮಿ ಬೆರಳಲ್ಲಿದ್ದ ಚಿನ್ನದ ಉಂಗುರು, ಕತ್ತಿನಲ್ಲಿದ್ದ ಚಿನ್ನದ ಸರ, ಲಿಂಗಾಯತ ಧರ್ಮದವರು ಧರಿಸುವ ಕರಡಿಕ ಮತ್ತು ಲಿಂಗ ಹಾಗೂ ವಾಚನ್ನು ಕಸಿದುಕೊಂಡಿದ್ದನು. ಅಲ್ಲದೆ ರೇಣುಕಾಸ್ವಾಮಿ ಮೃತಪಟ್ಟ ನಂತರ ಆತನ ಶರೀರವನ್ನು ಮೋರಿಯಲ್ಲಿ ಎಸೆಯುವಲ್ಲಿ ಕೂಡ ಭಾಗಿಯಾಗಿದ್ದನು. ಈತನ ಪ್ಯಾಂಟ್ ಮೇಲೆ ರೇಣುಕಾಸ್ವಾಮಿಯ ರಕ್ತದ ಮಾದರಿ ಪತ್ತೆಯಾಗಿದ್ದವು ಎಂದು ಎಫ್ ಎಸ್ ಎಲ್ ವರದಿ ಹೇಳುತ್ತದೆ ಎಂದು ಸಹ ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT