ರೇಣುಕಾಸ್ವಾಮಿಯ ಅಂತಿಮ ಫೋಟೋ 
ರಾಜ್ಯ

ನಟ ದರ್ಶನ್, ಗ್ಯಾಂಗ್ ನಿಜಕ್ಕೂ ಮನುಷ್ಯರಲ್ಲ, ರಾಕ್ಷಸರು: ರೇಣುಕಾಸ್ವಾಮಿ ತಂದೆ ಆಕ್ರೋಶ

ಫೋಟೊ ನೋಡಿದರೆ ದಿಗ್ಭ್ರಮೆಯಾಗುತ್ತಿದೆ. ಹೇಗೆ ಹೇಳಬೇಕು ಎಂಬುದು ಗೊತ್ತಾಗುತ್ತಿಲ್ಲ. ನನ್ನ ಮಗ ಎಷ್ಟು ಹಿಂಸೆಯಿಂದ ಒದ್ದಾಡಿರಬಹುದು. ಕಿರುಚಿ ಅತ್ತಿರಬಹುದು ಎಂದು ನೆನೆಸಿಕೊಂಡರೆ ನೋವು ಹೆಚ್ಚಾಗುತ್ತದೆ.

ಚಿತ್ರದುರ್ಗ: ಮಂಡಿಯೂರಿ ಅಂಗಲಾಚಿ ಬೇಡಿ ಕೊಂಡರೂ ಕರುಣೆ ತೋರಿಸದೆ ತನ್ನ ಮಗನನ್ನು ಕ್ರೂರವಾಗಿ ಕೊಲೆ ಮಾಡಿರುವ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ನಿಜಕ್ಕೂ ಮನುಷ್ಯರಲ್ಲ, ರಾಕ್ಷಸರು ಎಂದು ರೇಣುಕಾಸ್ವಾಮಿಯ ತಂದೆ ಕಾಶಿನಾಥಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿಯವರ 2 ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋಟೊ ನೋಡಿದರೆ ದಿಗ್ಭ್ರಮೆಯಾಗುತ್ತಿದೆ. ಹೇಗೆ ಹೇಳಬೇಕು ಎಂಬುದು ಗೊತ್ತಾಗುತ್ತಿಲ್ಲ. ನನ್ನ ಮಗ ಎಷ್ಟು ಹಿಂಸೆಯಿಂದ ಒದ್ದಾಡಿರಬಹುದು. ಕಿರುಚಿ ಅತ್ತಿರಬಹುದು ಎಂದು ನೆನೆಸಿಕೊಂಡರೆ ನೋವು ಹೆಚ್ಚಾಗುತ್ತದೆ. ದರ್ಶನ್ ಹಾಗೂ ಆತನ ಗ್ಯಾಂಗ್ ನಿಜ ಜೀವನದಲ್ಲಿ ರಾಕ್ಷಸರಿಗಿಂತಲೂ ಭಯಾನಕ ರಾಕ್ಷಸರು ಎಂದರು.

ರೇಣುಕಾಸ್ವಾಮಿ ಸಾಯುವ ಮುನ್ನಾ ನನಗೆ ತಾಯಿ, ಗರ್ಭಿಣಿ ಹೆಂಡತಿ ಇರುವುದಾಗಿ ಹೇಳಿದ್ದರೂ ಕ್ಷಮಿಸದೆ ಆತನನ್ನು ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿದೆ. ಅವರನ್ನು ಒಂಚೂರು ಮನುಷ್ಯತ್ವ ಅನ್ನೋದೆ ಇಲ್ಲ. ಸರ್ಕಾರ ನನ್ನ ಮಗನಿಗಾದಂತೆ ಅವರಿಗೂ ಕಠಿಣ ಶಿಕ್ಷೆ ನೀಡಬೇಕು ಎಂದು ಅಳಲು ತೋಡಿಕೊಂಡರು. ರೇಣುಕಾಸ್ವಾಮಿ ಪತ್ನಿ ಗರ್ಭಿಣಿಯಾಗಿದ್ದು, ಮಗುವಿನ ತೂಕ ಕಡಿಮೆಯಾಗಿದೆ. ವೈದ್ಯರು ನಿರಂತರ ಉಪಚಾರ ಮಾಡುತ್ತಿದ್ದಾರೆ ಎಂದರು.

ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ ಅನಾಥವಾಗಿ ಬಿದ್ದಿರುವ ಫೋಟೋಗಳು ಪೊಲೀಸರಿಗೆ ಸಿಕ್ಕಿದೆ. ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT