ಸಿಎಂ ಸಿದ್ದರಾಮಯ್ಯ ಭೇಟಿಯಾದ ಫೈರ್ ನಿಯೋಗ 
ರಾಜ್ಯ

ಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ FIRE ಮನವಿ

ಈ ಸಂಬಂಧ 130ಕ್ಕೂ ಅಧಿಕ ಮಂದಿ ಸಹಿ ಮಾಡಿರುವ ಪತ್ರವನ್ನು ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹಿರಿಯ ಲೇಖಕಿ ಡಾ. ವಿಜಯಾ, ಚೇತನ್, ನಟಿಯರಾದ ಶೃತಿ ಹರಿಹರನ್, ನೀತು ಈ ನಿಯೋಗದಲ್ಲಿದ್ದರು.

ಬೆಂಗಳೂರು: ಮಲಯಾಳಂ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ, ಶೋಷಣೆ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ನೇತೃತ್ವದಲ್ಲಿನ ಫೈರ್ ನಿಯೋಗ ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು.

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆ ಅಧ್ಯಯನ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿಸಮಿತಿ ರಚಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಈ ಸಂಬಂಧ 130ಕ್ಕೂ ಅಧಿಕ ಮಂದಿ ಸಹಿ ಮಾಡಿರುವ ಪತ್ರವನ್ನು ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹಿರಿಯ ಲೇಖಕಿ ಡಾ. ವಿಜಯಾ, ಚೇತನ್, ನಟಿಯರಾದ ಶೃತಿ ಹರಿಹರನ್, ನೀತು ಈ ನಿಯೋಗದಲ್ಲಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಚೇತನ್, ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಕಿರುಕುಳ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ವಿಸ್ತೃತವಾದ ಸಭೆ ನಡೆಸಲು ಮುಖ್ಯಮಂತ್ರಿ ಒಪ್ಪಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ