ಸಿಎಂ ಸಿದ್ದರಾಮಯ್ಯ ಭೇಟಿಯಾದ ಫೈರ್ ನಿಯೋಗ 
ರಾಜ್ಯ

ಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ FIRE ಮನವಿ

ಈ ಸಂಬಂಧ 130ಕ್ಕೂ ಅಧಿಕ ಮಂದಿ ಸಹಿ ಮಾಡಿರುವ ಪತ್ರವನ್ನು ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹಿರಿಯ ಲೇಖಕಿ ಡಾ. ವಿಜಯಾ, ಚೇತನ್, ನಟಿಯರಾದ ಶೃತಿ ಹರಿಹರನ್, ನೀತು ಈ ನಿಯೋಗದಲ್ಲಿದ್ದರು.

ಬೆಂಗಳೂರು: ಮಲಯಾಳಂ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ, ಶೋಷಣೆ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ನೇತೃತ್ವದಲ್ಲಿನ ಫೈರ್ ನಿಯೋಗ ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು.

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆ ಅಧ್ಯಯನ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿಸಮಿತಿ ರಚಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಈ ಸಂಬಂಧ 130ಕ್ಕೂ ಅಧಿಕ ಮಂದಿ ಸಹಿ ಮಾಡಿರುವ ಪತ್ರವನ್ನು ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹಿರಿಯ ಲೇಖಕಿ ಡಾ. ವಿಜಯಾ, ಚೇತನ್, ನಟಿಯರಾದ ಶೃತಿ ಹರಿಹರನ್, ನೀತು ಈ ನಿಯೋಗದಲ್ಲಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಚೇತನ್, ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಕಿರುಕುಳ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ವಿಸ್ತೃತವಾದ ಸಭೆ ನಡೆಸಲು ಮುಖ್ಯಮಂತ್ರಿ ಒಪ್ಪಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT