ಡಿಕ್ಕಿ ಸಂಭವಿಸಿದ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ಬಸ್  
ರಾಜ್ಯ

ರಾಯಚೂರು: ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ, ಇಬ್ಬರು ಮಕ್ಕಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ

ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಮಾನ್ವಿ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ಗುರುವಾರ ನಡೆದಿದೆ.

ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದರೆ, ಒಬ್ಬ ಬಾಲಕ ಹಾಗೂ ಚಾಲಕನ ಸ್ಥಿತಿ ಗಂಭೀರವಾಗಿದೆ. ಮೂರು ಮಕ್ಕಳ ಕಾಲುಗಳು ತುಂಡಾಗಿದ್ದು, ಅವರಿಗೆ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಡಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾದ ಶಾಲಾ ವಾಹನ

ಜಿಲ್ಲಾಧಿಕಾರಿ ಕೆ. ನಿತೀಶ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತಪಟ್ಟ ಮಕ್ಕಳ ಪಾಲಕರಿಗೆ ತಲಾ 5 ಲಕ್ಷ ಹಾಗೂ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT