ರಾಜ್ಯ

ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ: 5,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಮುಂದು

ಕೈಗಾರಿಕಾ ಪ್ರದೇಶಗಳಿಗೆ ನದಿ ನೀರು ಪೂರೈಸಲು ಅಂದಾಜು 2,000 ಕೋಟಿ ರೂಪಾಯಿ, ಹಳೆಯ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಿಗೆ ಭೂ ಸ್ವಾಧೀನಕ್ಕೆ 3,000 ಕೋಟಿ ರೂಪಾಯಿಗಳ ಅಂದಾಜು ಮಾಡಲಾಗಿದೆ.

ಬೆಂಗಳೂರು: ಹೊಸ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಮತ್ತು ಈಗಿರುವ ಪ್ರದೇಶಗಳಿಗೆ ನದಿ ನೀರು ಸರಬರಾಜು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು ಪಡೆಯಲು ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಭೂತ ಸೌಕರ್ಯಗಳ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (CII) ಇಂಡಿಯಾ ಇನ್ನೋವೇಶನ್ ಶೃಂಗಸಭೆ - ಇನ್ನೋವರ್ಜ್ 2024ರ 20 ನೇ ಆವೃತ್ತಿಯನ್ನು ಅವರು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕದ ಬಹುತೇಕ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಕೊರತೆಯಿದೆ ಎಂದು ಹೇಳಿದ ಪಾಟೀಲ್, ಕೈಗಾರಿಕಾ ಪ್ರದೇಶಗಳಿಗೆ ಪ್ರತ್ಯೇಕ ನದಿ ನೀರು ಸರಬರಾಜು ಇಲ್ಲ. ಈ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಹೇಳಿದರು. ಈ ಕುರಿತು ರಾಜ್ಯ ಹಣಕಾಸು ಇಲಾಖೆ ಜತೆ ಚರ್ಚಿಸಲಾಗುತ್ತಿದೆ ಎಂದರು.

ಕೈಗಾರಿಕಾ ಪ್ರದೇಶಗಳಿಗೆ ನದಿ ನೀರು ಪೂರೈಸಲು ಅಂದಾಜು 2,000 ಕೋಟಿ ರೂಪಾಯಿ, ಹಳೆಯ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಿಗೆ ಭೂ ಸ್ವಾಧೀನಕ್ಕೆ 3,000 ಕೋಟಿ ರೂಪಾಯಿಗಳ ಅಂದಾಜು ಮಾಡಲಾಗಿದೆ ಎಂದರು.

ಸ್ಟಾರ್ಟಪ್ ಪಾರ್ಕ್ಸ್

ಕರ್ನಾಟಕವು ಕೈಗಾರಿಕೆ, ಸಂಶೋಧನೆ, ಅಭಿವೃದ್ಧಿ ಮತ್ತು ತಂತ್ರಜ್ಞಾನಗಳಿಗೆ ಒಲವು ತೋರುತ್ತಿದೆ ಎಂದ ಸಚಿವರು, ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಸ್ಟಾರ್ಟ್‌ಅಪ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಸ್ಟಾರ್ಟಪ್ ಪಾರ್ಕ್‌ಗೆ ಅಗತ್ಯವಿರುವ ಭೂಮಿಯನ್ನು ಈಗಾಗಲೇ ಬೆಂಗಳೂರಿನಲ್ಲಿ ಗುರುತಿಸಲಾಗಿದ್ದು, ಬೆಳಗಾವಿಯಲ್ಲಿ ಒಂದನ್ನು ಹುಡುಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಕರ್ನಾಟಕ ರಾಜ್ಯವು ವಿಜ್ಞಾನ ಮತ್ತು ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಯ ಕೇಂದ್ರವಾಗಿದೆ. ಇದರೊಂದಿಗೆ ನಾವು ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ಸಹ ರಚಿಸಬೇಕಾಗಿದೆ, ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ಪರಿಣಾಮಕಾರಿಯಾಗಿ ಸಾಧಿಸುವುದು ರಾಜ್ಯದ ಗುರಿಯಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT