ಸಾಂದರ್ಭಿಕ ಚಿತ್ರ  
ರಾಜ್ಯ

ನಾಳೆ ಗಣೇಶ ಚತುರ್ಥಿ: ಬೆಂಗಳೂರು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗಣೇಶ ಹಬ್ಬಕ್ಕೆ ಬೆಸ್ಕಾಂ ಮಾರ್ಗಸೂಚಿ: ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT