ಲಿಂಗರಾಜ್ ಬಡಿಗೇರ್ - ರಾಯಲ್‌ ಗ್ರೀನ್ ನಿಸರ್ಗ ಲೇಔಟ್ 
ರಾಜ್ಯ

ರಾಯಲ್‌ ಗ್ರೀನ್ ನಿಸರ್ಗ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ(ರಿ)ದ ಅಧ್ಯಕ್ಷರಾಗಿ ಲಿಂಗರಾಜ್ ಬಡಿಗೇರ್ ಆಯ್ಕೆ

ಲೇಔಟ್ ನಿವಾಸಿಗಳ ಒಟ್ಟಾರೆ ಕಲ್ಯಾಣಕ್ಕಾಗಿ ಈ ಸಂಘ ರಚನೆಯಾಗಿದ್ದು, ಲೇಔಟ್ ನಲ್ಲಿ ಹಲವು ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಸಂಘದ ಮೊದಲ ಅಧ್ಯಕ್ಷ ಲಿಂಗರಾಜ್ ಬಡಿಗೇರ್ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಹೆಮ್ಮಿಗೆಪುರ ವಾರ್ಡ್ ನ ರಾಯಲ್‌ ಗ್ರೀನ್ ನಿಸರ್ಗ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ(ರಿ)ದ ಸಂಸ್ಥಾಪಕ ಅಧ್ಯಕ್ಷರಾಗಿ ಲಿಂಗರಾಜ್ ಬಡಿಗೇರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಪತ್ರಕರ್ತ ಲಿಂಗರಾಜ್ ಬಡಿಗೇರ್ ಅವರನ್ನು ಅಧ್ಯಕ್ಷರಾಗಿ, ವಿನಯ್ ಕುಮಾರ್ ಪಿ ಹಾಗೂ ಪೃಥ್ವಿ ಗೌಡ ಅವರನ್ನು ಉಪಾಧ್ಯಕ್ಷರಾಗಿ, ವಿಜಯ್ ಪ್ರಕಾಶ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ, ಕಾರ್ಯದರ್ಶಿಯಾಗಿ ವಿರೇಶ್ ಎಸ್, ಖಜಾಂಚಿಯಾಗಿ ಬಿಎಂ ಗಿರೀಶ್ ಹಾಗೂ ಸಹ ಖಜಾಂಚಿಯಾಗಿ ಮೇಘ ಲೋಹಿತ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಲೇಔಟ್ ನಿವಾಸಿಗಳ ಒಟ್ಟಾರೆ ಕಲ್ಯಾಣಕ್ಕಾಗಿ ಈ ಸಂಘ ರಚನೆಯಾಗಿದ್ದು, ಲೇಔಟ್ ನಲ್ಲಿ ಹಲವು ಮೂಲ ಸೌಕರ್ಯಗಳ ಕೊರತೆ ಇದೆ. ಅವುಗಳನ್ನು ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಸಂಘದ ಮೊದಲ ಅಧ್ಯಕ್ಷ ಲಿಂಗರಾಜ್ ಬಡಿಗೇರ್ ಹೇಳಿದ್ದಾರೆ.

450ಕ್ಕೂ ಹೆಚ್ಚು ನಿವೇಶನಗಳನ್ನು ಹೊಂದಿರುವ ಈ ಲೇಔಟ್ ನ ಶೇ. 20 ರಷ್ಟು ನಿವೇಶನಗಳಲ್ಲಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗಿದ್ದು, ಜನ ವಾಸವಾಗಿದ್ದಾರೆ. ಆದರೆ, ಕಾವೇರಿ ನೀರು ಸೇರಿದಂತೆ ಕೆಲವು ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT