ಲಿಂಗರಾಜ್ ಬಡಿಗೇರ್ - ರಾಯಲ್‌ ಗ್ರೀನ್ ನಿಸರ್ಗ ಲೇಔಟ್ 
ರಾಜ್ಯ

ರಾಯಲ್‌ ಗ್ರೀನ್ ನಿಸರ್ಗ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ(ರಿ)ದ ಅಧ್ಯಕ್ಷರಾಗಿ ಲಿಂಗರಾಜ್ ಬಡಿಗೇರ್ ಆಯ್ಕೆ

ಲೇಔಟ್ ನಿವಾಸಿಗಳ ಒಟ್ಟಾರೆ ಕಲ್ಯಾಣಕ್ಕಾಗಿ ಈ ಸಂಘ ರಚನೆಯಾಗಿದ್ದು, ಲೇಔಟ್ ನಲ್ಲಿ ಹಲವು ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಸಂಘದ ಮೊದಲ ಅಧ್ಯಕ್ಷ ಲಿಂಗರಾಜ್ ಬಡಿಗೇರ್ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಹೆಮ್ಮಿಗೆಪುರ ವಾರ್ಡ್ ನ ರಾಯಲ್‌ ಗ್ರೀನ್ ನಿಸರ್ಗ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ(ರಿ)ದ ಸಂಸ್ಥಾಪಕ ಅಧ್ಯಕ್ಷರಾಗಿ ಲಿಂಗರಾಜ್ ಬಡಿಗೇರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಪತ್ರಕರ್ತ ಲಿಂಗರಾಜ್ ಬಡಿಗೇರ್ ಅವರನ್ನು ಅಧ್ಯಕ್ಷರಾಗಿ, ವಿನಯ್ ಕುಮಾರ್ ಪಿ ಹಾಗೂ ಪೃಥ್ವಿ ಗೌಡ ಅವರನ್ನು ಉಪಾಧ್ಯಕ್ಷರಾಗಿ, ವಿಜಯ್ ಪ್ರಕಾಶ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ, ಕಾರ್ಯದರ್ಶಿಯಾಗಿ ವಿರೇಶ್ ಎಸ್, ಖಜಾಂಚಿಯಾಗಿ ಬಿಎಂ ಗಿರೀಶ್ ಹಾಗೂ ಸಹ ಖಜಾಂಚಿಯಾಗಿ ಮೇಘ ಲೋಹಿತ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಲೇಔಟ್ ನಿವಾಸಿಗಳ ಒಟ್ಟಾರೆ ಕಲ್ಯಾಣಕ್ಕಾಗಿ ಈ ಸಂಘ ರಚನೆಯಾಗಿದ್ದು, ಲೇಔಟ್ ನಲ್ಲಿ ಹಲವು ಮೂಲ ಸೌಕರ್ಯಗಳ ಕೊರತೆ ಇದೆ. ಅವುಗಳನ್ನು ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಸಂಘದ ಮೊದಲ ಅಧ್ಯಕ್ಷ ಲಿಂಗರಾಜ್ ಬಡಿಗೇರ್ ಹೇಳಿದ್ದಾರೆ.

450ಕ್ಕೂ ಹೆಚ್ಚು ನಿವೇಶನಗಳನ್ನು ಹೊಂದಿರುವ ಈ ಲೇಔಟ್ ನ ಶೇ. 20 ರಷ್ಟು ನಿವೇಶನಗಳಲ್ಲಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗಿದ್ದು, ಜನ ವಾಸವಾಗಿದ್ದಾರೆ. ಆದರೆ, ಕಾವೇರಿ ನೀರು ಸೇರಿದಂತೆ ಕೆಲವು ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT