ರಾಜ್ಯ

ಗೌರಿ-ಗಣೇಶ ಹಬ್ಬ: ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ

ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ-ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್‌ಅನ್ನು ಸೆಪ್ಟೆಂಬರ್​ 7 ರಿಂದ 9 ವರೆಗೆ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಬೆಂಗಳೂರು: ನಾಡಿನೆಲ್ಲೆಡೆ ಇಂದು ಮತ್ತು ನಾಳೆ ಗೌರಿ ಗಣೇಶ ಹಬ್ಬದ ಸಂಭ್ರಮ ಸಡಗರ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಬ್ಬದ ಸಂಭ್ರಮ ಜೋರಾಗಿದೆ. ಸಾರ್ವಜನಿಕ ಗಣೇಶೋತ್ಸವಗಳು, ಗಣೇಶ ಮಂಡಳಿಗಳು ಗಣಪನನ್ನು ಕೂರಿಸುತ್ತಿವೆ.

ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧಿಸಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹಲಸೂರು ಲೇಕ್​ ಕಲ್ಯಾಣಿಯಲ್ಲಿ ನಾಳೆಯಿಂದ 9ರವರೆಗೆ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40 ಸಾವಿರಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಕೆರೆಯ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುತ್ತದೆ. ವಾಹನ ಸವಾರರ ಸುಗಮ ಸಂಚಾರಕ್ಕಾಗಿ ಸಂಜೆ 4 ಗಂಟೆಯಿಂದ ಮರುದಿನ ಬೆಳಗಿನ ಜಾವ 4 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ

ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇಜಿ ಕಡೆಯಿಂದ ಕನ್ನಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಯಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣಸ್ವಾಮಿ ಮೊದಲಿಯಳ ರಸ್ತೆಯಲ್ಲಿ, ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕಣ್ಮು ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ವಿಕಮುಖ ಸಂಚಾರಕ್ಕೆ, ಅನುವು ಮಾಡಿಕೊಡಲಾಗಿದೆ.

ಮಾರ್ಗ ಬದಲಾವಣೆ

ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚಿಟ್ಟೆ ರಸ್ತೆ ಡಿಕನ್ಸನ್ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ-ವೀರ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೊಗಬಹುದು.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣಸ್ವಾಮಿ ಮೊದಾಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕೆ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟ‌ರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರೆ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದು.

ವಾಹನ ನಿಲುಗಡೆ ನಿಷೇಧ

ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ-ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್‌ಅನ್ನು ಸೆಪ್ಟೆಂಬರ್​ 7 ರಿಂದ 9 ವರೆಗೆ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT