ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಶನಿವಾರ ನಡೆದಿದೆ.

ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆಟೋದಲ್ಲಿದ್ದ ಇನ್ನಿತರ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರವಾದ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT