ನಟ ದರ್ಶನ್ online desk
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಮತ್ತೊಂದು ಬೇಡಿಕೆ ಈಡೇರಿಸಿದ ಬಳ್ಳಾರಿ ಜೈಲಧಿಕಾರಿಗಳು

ಜೈಲಿನ ನಿಯಮಾವಳಿಯ ಪ್ರಕಾರ ಖೈದಿಗಳಿಗೆ ಅವರ ಮನವಿಯ ಆಧಾರದ ಮೇಲೆ ಟಿವಿ ಅಳವಡಿಸುವ ವ್ಯವಸ್ಥೆ ಇದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಇದೀಗ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಮತ್ತೊಂದು ಬೇಡಿಕೆಯನ್ನು ಪೊಲೀಸರು ಈಡೇರಿಸಿದ್ದಾರೆ.

ದರ್ಶನ್ ಅವರು ಜೈಲಿನೊಳಗಿನ ಇಂಡಿಯನ್ ಟಾಯ್ಲೆಟ್ ನಲ್ಲಿ ನನಗೆ ಕೂರಲಾಗುವುದಿಲ್ಲವಾದ್ದರಿಂದ ಸರ್ಜಿಕಲ್ ಚೇರ್ ಒದಗಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಫೋನ್ ಕಾಲ್ ಮಾಡಲು ಅನುಮತಿ ನೀಡಬೇಕು ಎಂದು ಸಹ ಅವರು ಜೈಲಧಿಕಾರಿಗೆ ಮನವಿ ಮಾಡಿದ್ದರು. ಈ ಎರಡೂ ಮನವಿಗಳನ್ನು ಪುರಸ್ಕರಿಸಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ.

ಕಳೆದ ವಾರವಷ್ಟೇ ದರ್ಶನ್ ಅವರು ತನ್ನ ವಿರುದ್ಧ ಸಲ್ಲಿಸಲಾಗಿರುವ ಚಾರ್ಚ್ ಶೀಟ್ ನಲ್ಲಿ ಏನಿದೆ ಎಂಬುದನ್ನು ಅರಿಯಲು ಮತ್ತು ಹೊರ ಜಗತ್ತಿನಲ್ಲಿ ಏನು ನಡೆಯುತ್ತದೆ ಎಂಬುದನ್ನು ತಿಳಿಯುವ ಸಲುವಾಗಿ ತನಗೆ ಟಿವಿ ಒದಗಿಸಿಕೊಡುವಂತೆ ಜೈಲಧಿಕಾರಿಗಳು ಮನವಿ ಮಾಡಿದ್ದರು. ಅದರಂತೆ ಇದೀಗ 32 ಇಂಚಿನ ಟಿವಿಯಲ್ಲಿ ದರ್ಶನ್ ಅವರನ್ನು ಬಂಧಿಯಾಗಿರಿಸಿರುವ ಸೆಲ್ ನಲ್ಲಿ ಅಳವಡಿಸಲಾಗಿದೆ. ಜೈಲಿನ ನಿಯಮಾವಳಿಯ ಪ್ರಕಾರ ಖೈದಿಗಳಿಗೆ ಅವರ ಮನವಿಯ ಆಧಾರದ ಮೇಲೆ ಟಿವಿ ಅಳವಡಿಸುವ ವ್ಯವಸ್ಥೆ ಇದೆ. ಆದರೆ ಟಿವಿ ರಿಪೇರಿಯಾಗಬೇಕಿದ್ದರಿಂದ ಅಳವಡಿಸಲು ವಿಳಂಬವಾಗಿದೆ ಎಂದು ಜೈಲಧಿಕಾರಿ ತಿಳಿಸಿದ್ದಾರೆ.

ಈ ಎಲ್ಲಾ ವ್ಯವಸ್ಥೆಗಳಿಗಾಗಿ ದರ್ಶನ್ ಅವರು ಜೈಲಧಿಕಾರಿಯ ಖಾಸಗಿ ಖಾತೆಗೆ 35000 ರೂಪಾಯಿಗಳನ್ನು ಜಮಾ ಮಾಡಿದ್ದಾರೆ. ಜೊತೆಗೆ ಜೈಲು ಕ್ಯಾಂಟೀನಿಂದ ತರಿಸಿಕೊಂಡಿರುವ ಟೀ, ಕಾಫಿಗಾಗಿ ಈವರೆಗೆ 735 ರೂಪಾಯಿ ವ್ಯಯಿಸಿದ್ದಾರೆ ಎಂದೂ ಮೂಲಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!