ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು!

ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ವಿಜಯಪುರ: ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ದೇವೇಂದ್ರ ಬಡಿಗೇರ್ (24) ಮೃತ ದುರ್ದೈವಿ. ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಕೂಡಲೇ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

Video: ಯಶ್​ಗೆ ಬಿಗ್ ಶಾಕ್! ‘ಟಾಕ್ಸಿಕ್’ ಇವೆಂಟ್​ನಲ್ಲಿ ಅವಘಡ; FIR ದಾಖಲು

ಅಮೆರಿಕದಲ್ಲಿ ಮಗಳ ಮುಂದೆಯೇ ಗುಜರಾತ್ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಹೊಸ ವ್ಯವಹಾರ ಆರಂಭಿಸಿದ ವಾರದಲ್ಲೇ ಭೀಕರ ಕೃತ್ಯ!

ತಲೆಮಾರುಗಳ ಜನರ ಪರಿಶ್ರಮ; ಬೆಂಗಳೂರು ಭವಿಷ್ಯವನ್ನೇ ಹಾಳುಮಾಡಲು ಹೊರಟಿದ್ದೀರಾ?: ಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೇಜಸ್ವಿ ಸೂರ್ಯ ಆಕ್ರೋಶ

ಯಾದಗಿರಿ: ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು; 8 ಕಾರ್ಮಿಕರ ಸ್ಥಿತಿ ಗಂಭೀರ