ಸಾಂದರ್ಭಿಕ ಚಿತ್ರ 
ರಾಜ್ಯ

ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವು!

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಅಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದ್ದು, ಈ ವೇಳೆ ಮಗು ಆಟವಾಡುತ್ತವೇ ಬಾಟಲ್ ಮುಚ್ಚಳವನ್ನು ಬಾಯಿಗೆ ಹಾಕಿಕೊಂಡಿದೆ. ಕೆಲನಿಮಿಷಗಳಲ್ಲೇ ಮುಚ್ಚಳ ಮಗುವಿನ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದ್ದು, ಈ ವೇಳೆ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ.

ಮುಚ್ಚಳ ನುಗಿ ಒದ್ದಾಡಿದ ಮಗು

ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಟೆಲ್‌ ಮುಚ್ಚಳ ನುಂಗಿದ ಕೂಡಲೇ ಮಗು ಉಸಿರಾಡಲು ಆಗದೆ ಒದ್ದಾಡಿದೆ, ಜೋರಾಗಿ ಅಳುವ ಸದ್ದು ಕೇಳಿ ಪೋಷಕರು ಬಂದಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದಾಗಲೇ ಮಗು ಸಾವನ್ನಪ್ಪಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಜಾಮೀನು ಸಾಮಾನ್ಯ ನಿಯಮ; ಜೈಲು ವಿನಾಯಿತಿ ತತ್ವ UAPA ಪ್ರಕರಣಗಳಿಗೂ ಅನ್ವಯ": ಉಗ್ರ ಆರೋಪಿಗೆ ಜಾಮೀನು ನೀಡಿದ 'ಸುಪ್ರೀಂ'

ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ: ದೇವರ ಹೆಸರಿನಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ..!

KSRTC-BMTC Strike: ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ; ‘ನೋ ವರ್ಕ್ ನೋ ಪೇ’ ನಿಯಮ ಜಾರಿಗೆ ಸರ್ಕಾರ ಮುಂದು, ಕಠಿಣ ಕ್ರಮದ​​ ಎಚ್ಚರಿಕೆ..!

ಪ್ರಧಾನಿ ಮೋದಿ, ಕೇಂದ್ರ ಸರ್ಕಾರಕ್ಕೆ ದೂರದೃಷ್ಟಿ ಕೊರತೆ: ಹಣದುಬ್ಬರ ಏರಿಕೆ- ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

'Lack Of Knowledge': ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!

SCROLL FOR NEXT