ನಟ ದರ್ಶನ್ online desk
ರಾಜ್ಯ

Renukaswamy Murder Case: ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ಸೆ.12 ವರೆಗೆ ವಿಸ್ತರಣೆ

ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ.

ನಟ ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.12ರ ವರೆಗೆ ವಿಸ್ತರಿಸಿ ಕೋರ್ಟ್‌ ಆದೇಶಿಸಿದೆ.

ಇನ್ನು ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು.

ದರ್ಶನ್​ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT