ಸಚಿವ ಬೈರತಿ ಸುರೇಶ್‌ 
ರಾಜ್ಯ

ಮುಡಾ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ: ಸಚಿವ ಭೈರತಿ ಸುರೇಶ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ತನಿಖೆಗೆ ಸರ್ಕಾರ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನ್ಯಾಯಾಂಗ ಆಯೋಗವನ್ನು ನೇಮಿಸಿದೆ.

ಮೈಸೂರು: ಮುಡಾ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಭಾನುವಾರ ಹೇಳಿದರು.

ಚಾಮುಂಡೇಶ್ವರಿ, ಶ್ರೀಕಂಠೇಶ್ವರ, ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಮ್ಮ, ನಾರಾಯಣಸ್ವಾಮಿ‌ ಗುಡಿಗಳಿಗೆ ತೆರಳಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ತನಿಖೆಗೆ ಸರ್ಕಾರ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನ್ಯಾಯಾಂಗ ಆಯೋಗವನ್ನು ನೇಮಿಸಿದೆ. ಆಯೋಗವು ವಿಚಾರಣೆ ಆರಂಭಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸುತ್ತಿದೆ. ವರದಿ ಬಂದ ಬಳಿಕ ಹಿಂದಿನ ಆಯುಕ್ತರಾಗಿದ್ದವರೂ ಸೇರಿದಂತೆ ಹಲವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ವಿರೋಧಪಕ್ಷಗಳ ಕನಸುಗಳು ನನಸಾಗುವುದಿಲ್ಲ ಎಂದು ತಿಳಿಸಿದರು.

ಪಿ.ಎನ್‌.ದೇಸಾಯಿ ಅವರ ಸಮಿತಿ ಮುಡಾದ ಹಗರಣವನ್ನು ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ತಾವು ಯಾವುದೇ ಹಸ್ತಕ್ಷೇಪ ನಡೆಸುವುದಿಲ್ಲ. ಯಾವುದೇ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ. ಅದು ಬೇರೆಯದೇ ಸ್ವರೂಪ ಪಡೆದುಕೊಳ್ಳುತ್ತದೆ. ವಿರೋಧಪಕ್ಷಗಳು ಅದನ್ನೇ ನೆಪ ಮಾಡಿಕೊಂಡು ಟೀಕೆ ಮಾಡುತ್ತವೆ. ಅದಕ್ಕಾಗಿ ನ್ಯಾಯಾಂಗದ ವರದಿ ಬರುವವರೆಗೂ ಮುಡಾ ಹಗರಣದ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT