ಡಿಸಿಎಂ ಡಿಕೆ.ಶಿವಕುಮಾರ್ 
ರಾಜ್ಯ

ಅಮೆರಿಕಾ ಭೇಟಿ ಖಾಸಗಿ ಪ್ರವಾಸವಷ್ಟೇ, ಯಾರನ್ನೂ ಭೇಟಿಯಾಗುತ್ತಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿ ಬೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ.

ಬೆಂಗಳೂರು: ಸೆ.8-16ರವರೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ವಾಷಿಂಗ್ಟನ್​​​​​​​​ಗೆ ಭೇಟಿ ನೀಡುತ್ತಿದ್ದಾರೆ.

ಈ ಭೇಟಿ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿದ್ದು, ವಿಶೇಷ ಆಹ್ವಾನದ ಮೇರೆಗೆ ಡಿಕೆ.ಶಿವಕುಮಾರ್ ಅವರು ಅಮೆರಿಕಾಗೆ ಭೇಟಿ ನೀಡುತ್ತಿದ್ದಾರೆಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ಭೇಟಿ ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶಗಳಿಲ್ಲ ಎಂದು ಹೇಳಿದ್ದಾರೆ.

ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿ ಬೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ಅವರು ವಿನಂತಿಸಿಕೊಂಡಿದ್ದಾರೆ.

ತಾವು ತಮ್ಮ ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಡಿಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಅಮೆರಿಕ ಪ್ರವಾಸದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಡಿಕೆ.ಶಿವಕುಮಾರ್ ಅವರು ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಪತ್ರದಲ್ಲಿ ವಾಷಿಂಗ್ಟನ್‌ಗೆ ತೆರಳಿ ಸೆಪ್ಟೆಂಬರ್ 16 ರಂದು ವಾಪಸಾಗುವುದಾಗಿ ತಿಳಿಸಿದ್ದಾರೆ.

ಶಿವಕುಮಾರ್ ಅವರ ಪ್ರವಾಸದ ವಿವರ ಗೌಪ್ಯವಾಗಿದ್ದು, ಅಮೆರಿಕಾ ಪ್ರವಾಸದ ವೇಳೆ ಡಿಕೆಶಿ ಅವರು ಕಮಲಾ ಹ್ಯಾರಿಸ್ ಅವರನ್ನು ಖಾಸಗಿಯಾಗಿ ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಶಿವಕುಮಾರ್ ಅವರು ಮಗಳು ಐಶ್ವರ್ಯಾ ಸೇರಿದಂತೆ ಅವರ ಕುಟುಂಬದ ಐವರು ಸದಸ್ಯರೊಂದಿಗೆ ಅಮೆರಿಕಾಗೆ ಭೇಟಿ ನೀಡುತ್ತಿದ್ದಾರೆ. ಡಿಕೆಶಿ ಕುಟುಂಬವು ಕರ್ನಾಟಕದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ಭೇಟಿ ಶೈಕ್ಷಣಿಕ ಅಂಶಗಳ ಉದ್ದೇಶವನ್ನು ಹೊಂದಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಡಿಕೆಶಿ ಕುಟುಂಬವು ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರ ಶೈಕ್ಷಣಿಕ ಪ್ರತಿಷ್ಠಾನದೊಂದಿಗೆ ನಂಟು ಹೊಂದಿದ್ದು, ಶಿವಕುಮಾರ್ ಕೂಡ ಈ ಶೈಕ್ಷಣಿಕ ಸಂಸ್ಥೆಗೆ ಸಹಾಯ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಹೀಗಾಗಿಯೇ ಮೇ. 15ರಂದು ಡಿಕೆ.ಶಿವಕುಮಾರ್ ಅವರ ಜನ್ಮದಿನದಂದು ಫೌಂಡೇಶನ್ ಶುಭಾಶಯಗಳನ್ನು ಕೋರಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT