ಸಂಗ್ರಹ ಚಿತ್ರ 
ರಾಜ್ಯ

ರಸ್ತೆ ಗುಂಡಿ ಮುಚ್ಚಲು ಸೆ.15 ಗಡುವು, ವಿಫಲವಾದರೆ ಸಸ್ಪೆಂಡ್​ ಫಿಕ್ಸ್​: ಅಧಿಕಾರಿಗಳಿಗೆ DCM ಎಚ್ಚರಿಕೆ

ಸೆಪ್ಟೆಂಬರ್‌ನಲ್ಲಿ ಹಠಾತ್ ಮಳೆಯಾಗುವ ನಿರೀಕ್ಷೆಯಿರುವುದರಿಂದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗುವ ಮತ್ತು ಕೆಲವು ಪ್ರದೇಶಗಳಲ್ಲಿ ಜಲಾವೃತವಾಗುವ ಸಾಧ್ಯತೆಗಳಿವೆ.

ಬೆಂಗಳೂರು: ಸೆಪ್ಟೆಂಬರ್‌ 15ರೊಳಗೆ ನಗರದ ಎಲ್ಲಾ ರಸ್ತೆಗಳು ಗುಂಡಿಗಳಿಂದ ಮುಕ್ತವಾಗಿರಬೇಕು. ಇಲ್ಲದಿದ್ದರೆ ಆ್ಯಕ್ಷನ್​ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆ ಮೇರೆಗೆ ಎಲ್ಲ ವಾರ್ಡ್‌ಗಳಲ್ಲಿ ಗುಂಡಿಗಳನ್ನು ತುಂಬುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಉಳಿದ ಕಾಮಗಾರಿಗಳನ್ನು ಬದಿಗೊತ್ತಿ ನಗರದಲ್ಲಿ ಗುಂಡಿಗಳು ಬಾರದಂತೆ ಕಾಮಗಾರಿಗಳ ಕೈಗೊಳ್ಳುವಂತೆ ಸೂಚಿಸಲಾಗಿದೆ. ನಗರದ ರಸ್ತೆಗಳನ್ನು ಗುಂಡಿ ಮುಕ್ತ ಮಾಡಲು ವಾರ್ಡ್ ಮಟ್ಟದ ಎಲ್ಲಾ ಅಧಿಕಾರಿಗಳು, ಅವರ ಶ್ರೇಣಿಯನ್ನು ಲೆಕ್ಕಿಸದೆ, ಕೆಲಸಕ್ಕಿಳಿದು ಕಾಮಗಾರಿಗಳ ಮೇಲ್ವಿಚಾರಣೆ ಮಾಡಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇತ್ತೀಚೆಗಷ್ಟೇ ಮರ ಬಿದ್ದು ಇಬ್ಬರು ಆಟೋ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಇನ್ನು ಮುಂದೆ ಮರ ಬೀಳದಂತೆ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ.

ಸೆಪ್ಟೆಂಬರ್‌ನಲ್ಲಿ ಹಠಾತ್ ಮಳೆಯಾಗುವ ನಿರೀಕ್ಷೆಯಿರುವುದರಿಂದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗುವ ಮತ್ತು ಕೆಲವು ಪ್ರದೇಶಗಳಲ್ಲಿ ಜಲಾವೃತವಾಗುವ ಸಾಧ್ಯತೆಗಳಿವೆ. ಈ ಕುರಿತು ಕ್ರಮಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಗಾಂಧಿ ಜಯಂತಿಯಂದು ನಗರದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳನ್ನು ಸೇರಿಸಿ ಬೃಹತ್ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸಲಾಗುವುದು. ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಾಗಿ ಪ್ರತಿಜ್ಞೆ ಮಾಡಲಿದ್ದಾರೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

ಸೆ.1ರಂದು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿಸಿಎಂ, ಗುಂಡಿಗಳನ್ನು ತುಂಬಿಸಲು 15 ದಿನಗಳ ಗಡುವು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT