ಬನ್ನೇರುಘಟ್ಟ ಜೈವಿಕ ಉದ್ಯಾನವನ online desk
ರಾಜ್ಯ

ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳ ದತ್ತು ಸ್ವೀಕಾರಕ್ಕೆ ನೀರಸ ಪ್ರತಿಕ್ರಿಯೆ

ಪ್ರಾಣಿ ದತ್ತು ಯೋಜನೆಯಿಂದ ತೆರಿಗೆ ವಿನಾಯಿತಿ ಲಭ್ಯವಾಗುತ್ತದೆ. ದತ್ತು ಪಡೆದವರಿಗೆ ಕೊಡುಗೆಗಾಗಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ಬೆಂಗಳೂರು: ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳ ದತ್ತು ಸ್ವೀಕಾರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2022 ರಿಂದ ಪ್ರಾಣಿ ದತ್ತು ಸ್ವೀಕರಿಸುವವರ ಸಂಖ್ಯೆ ಇಳಿಮುಖವಾಗಿದ್ದು, ಯೋಜನೆಯ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ಲಭ್ಯವಿಲ್ಲದೇ ಇರುವುದು ಇದಕ್ಕೆ ಪ್ರಮುಖ ಕಾರಣ ಎನ್ನುತ್ತಿದೆ ಬಿಬಿಪಿಯ ವ್ಯವಸ್ಥೆ

ಬೆಂಗಳೂರಿನಲ್ಲಿ ಹೆಚ್ಚಿನ ಆದಾಯ ಹೊಂದಿರುವ ಜನರಿದ್ದಾರೆ ಹಾಗೂ ವರ್ಷದಿಂದ ವರ್ಷಕ್ಕೆ ಬಿಬಿಪಿಗೆ ಬರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದರೆ ಪ್ರಾಣಿ, ಪಕ್ಷಿಗಳನ್ನು ದತ್ತು ಸ್ವೀಕರಿಸುವುದಕ್ಕೆ ಅಥವಾ ಅವುಗಳಿಗೆ ಆಹಾರ ನೀಡುವುದಕ್ಕೆ ಮುಂದಾಗುತ್ತಿರುವ ಜನರ ಸಂಖ್ಯೆ ಇನ್ನೂ ಕಡಿಮೆ ಇದೆ, ಇದಕ್ಕೆ ಪರಿಹಾರ ಹೇಗೆ ಕಂಡುಕೊಳ್ಳಬೇಕೆಂಬುದರ ಬಗ್ಗೆ ನಾವೂ ಯೋಚಿಸುತ್ತೇವೆ, ಪ್ರತಿ ಬಾರಿ ಯಾವುದೇ ವ್ಯಕ್ತಿ ಅಥವಾ ಗ್ರೂಪ್ ಬುಕಿಂಗ್ ಗಳಾದಾಗ ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದೆವೆ ಎಂದು ಮೃಗಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಾಣಿ ದತ್ತು ಯೋಜನೆಯಿಂದ ತೆರಿಗೆ ವಿನಾಯಿತಿ ಲಭ್ಯವಾಗುತ್ತದೆ. ದತ್ತು ಪಡೆದವರಿಗೆ ಕೊಡುಗೆಗಾಗಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ. ದತ್ತು ತೆಗೆದುಕೊಳ್ಳುವವರ ಹೆಸರನ್ನು ಆವರಣದ ಮೇಲೆ ದತ್ತು ಅವಧಿಯವರೆಗೆ ಪ್ರದರ್ಶಿಸಲಾಗುತ್ತದೆ. ವ್ಯಕ್ತಿಗೆ ಆರೋಗ್ಯ ಮತ್ತು ಆಹಾರದ ಬಗ್ಗೆ ನಿಯಮಿತ ನವೀಕರಣಗಳನ್ನು ನೀಡಲಾಗುತ್ತದೆ ಮತ್ತು ನಿಯಮಿತ ಮಧ್ಯಂತರದಲ್ಲಿ ಪ್ರಾಣಿಗಳನ್ನು ಭೇಟಿ ಮಾಡಲು ಅವಕಾಶವನ್ನು ನೀಡಲಾಗುತ್ತದೆ.

BBP ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್ ಮಾತನಾಡಿ, "ನಾವು ಜಾಗೃತಿ ಅಭಿಯಾನಗಳನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದೇವೆ" ಎಂದು ಹೇಳಿದರು. ದತ್ತು ಮತ್ತು ಆಹಾರಕ್ಕಾಗಿ ಹೆಚ್ಚು ಬೇಡಿಕೆಯಿರುವ ಪ್ರಾಣಿಗಳೆಂದರೆ ಅದು ಆನೆಗಳು, ಹುಲಿಗಳು ಮತ್ತು ಪಕ್ಷಿಗಳು ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

BBP ಡೇಟಾ ಪ್ರಕಾರ, 2021-22 ರಲ್ಲಿ, BBP ದತ್ತು ಯೋಜನೆಯಿಂದ ರೂ 1,09,85,307 ಗಳಿಸಿತ್ತು. ಈ ಸಂಖ್ಯೆ 2022-23ರಲ್ಲಿ ರೂ.66,08,493 ಗಳಷ್ಟಿದ್ದರೆ, 2023-24ರಲ್ಲಿ ರೂ.67,99,849 ಗಳಿಸಿದೆ. 2024-25ರಲ್ಲಿ (ಆಗಸ್ಟ್ 2024ರವರೆಗೆ) ರೂ.11,73,151 ಗಳಿಸಿದೆ.

ಡೇಟಾ 2021-22ರಲ್ಲಿ ದತ್ತು ಸ್ವೀಕರಿಸಿದವರ ಸಂಖ್ಯೆ ಏರಿಕೆಯಾಗಿದೆ ಎಂದು ತೋರಿಸುತ್ತದೆ, ಆದರೆ ಅದರ ನಂತರ ದತ್ತು ಮತ್ತು ಪಶು ಆಹಾರದ ಜವಾಬ್ದಾರಿ ವಹಿಸಿಕೊಳ್ಳುವವರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT