ಡಾ. ನಾರಾಯಣ ರಾಥೋಡ್ TNIE
ರಾಜ್ಯ

ವಿಜಯಪುರ: ಕುಡಿದು ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ ಸರ್ಕಾರಿ ವೈದ್ಯ

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ.

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ್ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಆಗಮಿಸಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆ ನಡೆದಿದೆ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಯಲ್ಲಿರುವ ಡಾ. ನಾರಾಯಣ ರಾಠೋಡ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆಯ ಕಿಟಕಿಗಳನ್ನು ಒಡೆದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ.

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಕರ್ತವ್ಯದ ವೇಳೆ ಮದ್ಯ ಸೇವಿಸಿ ನಾರಾಯಣ ಅಮಾನತುಗೊಂಡಿದ್ದರು. ಆತನ ಮೇಲೆ ಮಹಿಳಾ ರೋಗಿಗಳಿಗೆ ಮೌಖಿಕವಾಗಿ ನಿಂದಿಸಿದ ಮಾಡಿದ ಆರೋಪಗಳಿವೆ. ಇತ್ತೀಚಿನ ಘಟನೆಯ ನಂತರ, ಡಾ. ರಾಥೋಡ್ ರನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರಿಂದ ಮತ್ತು ಆಸ್ಪತ್ರೆಯ ಸಿಬ್ಬಂದಿಯಿಂದ ಒತ್ತಾಯ ಹೆಚ್ಚುತ್ತಿದೆ.

ಇದೇ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಡಾ.ರಾಥೋಡ್ ಅವರ ನಡೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ವಿಷಯವು ನನ್ನ ಗಮನಕ್ಕೆ ಬಂದಿರುವುದರಿಂದ, ತಪ್ಪಿತಸ್ಥ ವೈದ್ಯರ ವಿರುದ್ಧ ಗಂಭೀರ ಶಿಸ್ತು ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT