ಡಾ. ನಾರಾಯಣ ರಾಥೋಡ್ TNIE
ರಾಜ್ಯ

ವಿಜಯಪುರ: ಕುಡಿದು ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ ಸರ್ಕಾರಿ ವೈದ್ಯ

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ.

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ್ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಆಗಮಿಸಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆ ನಡೆದಿದೆ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಯಲ್ಲಿರುವ ಡಾ. ನಾರಾಯಣ ರಾಠೋಡ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆಯ ಕಿಟಕಿಗಳನ್ನು ಒಡೆದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ.

ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಕರ್ತವ್ಯದ ವೇಳೆ ಮದ್ಯ ಸೇವಿಸಿ ನಾರಾಯಣ ಅಮಾನತುಗೊಂಡಿದ್ದರು. ಆತನ ಮೇಲೆ ಮಹಿಳಾ ರೋಗಿಗಳಿಗೆ ಮೌಖಿಕವಾಗಿ ನಿಂದಿಸಿದ ಮಾಡಿದ ಆರೋಪಗಳಿವೆ. ಇತ್ತೀಚಿನ ಘಟನೆಯ ನಂತರ, ಡಾ. ರಾಥೋಡ್ ರನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರಿಂದ ಮತ್ತು ಆಸ್ಪತ್ರೆಯ ಸಿಬ್ಬಂದಿಯಿಂದ ಒತ್ತಾಯ ಹೆಚ್ಚುತ್ತಿದೆ.

ಇದೇ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಡಾ.ರಾಥೋಡ್ ಅವರ ನಡೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ವಿಷಯವು ನನ್ನ ಗಮನಕ್ಕೆ ಬಂದಿರುವುದರಿಂದ, ತಪ್ಪಿತಸ್ಥ ವೈದ್ಯರ ವಿರುದ್ಧ ಗಂಭೀರ ಶಿಸ್ತು ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video