ತಾವರ್ ಚಂದ್ ಗೆಹ್ಲೋಟ್ 
ರಾಜ್ಯ

11 ಮಸೂದೆಗಳಲ್ಲಿ 3 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ: ಸರ್ಕಾರ-ರಾಜಭವನದ ನಡುವೆ ಮತ್ತೆ ಜಟಾಪಟಿ!

ರಾಜ್ಯಪಾಲರ ಈ ನಡೆಯಿದ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಜಟಾಪಟಿ ಮತ್ತೆ ಉಲ್ಬಣಿಸುವ ಸಾಧ್ಯತೆ ಇದೆ

ಬೆಂಗಳೂರು: ಜನವರಿಯಿಂದ ಇಲ್ಲಿಯವರೆಗೆ ತಮಗೆ ಕಳುಹಿಸಲಾದ 11 ಮಸೂದೆಗಳ ಪೈಕಿ ಮರು ವಿಧೇಯಕಗಳಿಗೆ ಮಾತ್ರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಸೋಮವಾರ ಅಂಕಿತ ಹಾಕಿದ್ದಾರೆ.

ರಾಜ್ಯಪಾಲರ ಈ ನಡೆಯಿದ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಜಟಾಪಟಿ ಮತ್ತೆ ಉಲ್ಬಣಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ಸಾರ್ವಜನಿಕ ಪರೀಕ್ಷಾ ಮಸೂದ- 2023, ರೇಣುಕಾ ಯೆಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಮಸೂದೆ- 2024 ಮತ್ತು ಕರ್ನಾಟಕ ಪುರಸಭೆ ಮತ್ತು ಸಂಬಂಧಿತ ಕಾಯ್ದೆಗಳ ತಿದ್ದುಪಡಿ ಮಸೂದೆಗಳಿಗೆ ತಮ್ಮ ಒಪ್ಪಿಗೆ ನೀಡಿದರು. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ತಿದ್ದುಪಡಿ ಮಸೂದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ, ನೋಂದಣಿ - ಕರ್ನಾಟಕ ತಿದ್ದುಪಡಿ ಮಸೂದೆ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ಪ್ರದರ್ಶನ ಪ್ರಾಧಿಕಾರ, ಮತ್ತು ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ಮಸೂದೆ ಇನ್ನೂ ಮಂಜೂರಾಗಿಲ್ಲ.

ರಾಜ್ಯ ಸರ್ಕಾರ ಒಟ್ಟು 11 ಮಸೂದೆಗಳಿಗೆ ಅಂಕಿತ ಕೋರಿ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ, ಎಲ್ಲವನ್ನೂ ರಾಜ್ಯಪಾಲರು ಹೆಚ್ಚಿನ ವಿವರಣೆ ಕೋರಿ ಸರ್ಕಾರಕ್ಕೆ ವಾಪಸ್​ ಕಳುಹಿಸಿದ್ದರು. ಈ ಪೈಕಿ ಐದು ಮಸೂದೆಗಳನ್ನು ಮರುಪರಿಶೀಲಿಸಿ, ಹೆಚ್ಚಿನ ವಿವರಣೆಗಳನ್ನು ಲಗತ್ತಿಸಿ ಮತ್ತೆ ರಾಜಭವನಕ್ಕೆ ರವಾನಿಸಲಾಗಿತ್ತು. ಅದರಲ್ಲಿ ಮೂರು ಮಸೂದೆಗಳಿಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ.

ಕರ್ನಾಟಕ ಹೈಕೋರ್ಟಿನ ಧಾರವಾಡ ಪೀಠವು 2011 ಮತ್ತು 2012 ರಲ್ಲಿ ಮಾಡಲಾದ ತಿದ್ದುಪಡಿಗಳನ್ನು ರದ್ದುಗೊಳಿಸಿದ ನಂತರ ಕಾನೂನು ವಿವಾದದಲ್ಲಿ ಸಿಲುಕಿರುವ ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ತಿದ್ದುಪಡಿ ಮಸೂದೆ, 2024, ಬಾಕಿ ಉಳಿದಿರುವ ಮಸೂದೆಗಳಲ್ಲಿ ಒಂದಾಗಿದೆ.

ಸುಪ್ರೀಂ ಕೋರ್ಟ್ ಹೈಕೋರ್ಟ್‌ನ ತೀರ್ಪನ್ನು ತಡೆಹಿಡಿದಿದ್ದರೂ , ಅದಕ್ಕೆ ರಾಜ್ಯಪಾಲರು ಅನುಮೋದನೆ ತಡೆ ಹಿಡಿದಿದ್ದಾರೆ. ಇದಕ್ಕೂ ಮುನ್ನ ಕಲಬುರಗಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಪಾಲರು ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಅವರು ಉದ್ದೇಶಪೂರ್ವಕವಾಗಿ ಮಸೂದೆಗಳನ್ನು ತಡೆ ಹಿಡಿಯುತ್ತಿದ್ದಾರೆ, ಅನಗತ್ಯ ಸ್ಪಷ್ಟೀಕರಣಗಳನ್ನು ಹುಡುಕುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲಿ ಭ್ರಷ್ಟಾಚಾರ ತಡೆಗಟ್ಟುವ ಮಸೂದೆಗಳು ಮತ್ತು ಭೂ ದಾಖಲೆಗಳ ನೋಂದಣಿಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ' ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರುವುದಿಲ್ಲ; ಮಹಾಜನ ಸಮಿತಿ ವರದಿಯೇ ಅಂತಿಮ

RSS ನಿಷೇಧಿಸಬೇಕು: ಖರ್ಗೆ ಹೇಳಿಕೆಗೆ ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?

Nehru-Patel Correspondence: ಭಾರತ ದೊಂದಿಗೆ ಕಾಶ್ಮೀರ ವಿಲೀನ, ನೆಹರು-ಪಟೇಲ್ ಪತ್ರ ವ್ಯವಹಾರ ಓದಿ, ಮೋದಿಗೆ ಖರ್ಗೆ ತಿರುಗೇಟು!

ಕೇಂದ್ರ ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಹೇರುತ್ತಿದೆ; ಆದ್ರೆ ರಾಜ್ಯದ ಮದರಸಗಳಲ್ಲೂ ಕನ್ನಡ ಕಲಿಕೆ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಸಿಎಂ ಹುದ್ದೆ ಕನಸು ತ್ಯಾಗದ ಸುಳಿವು ನೀಡಿದ್ರಾ DK Shivakumar?

SCROLL FOR NEXT