ತುಂಗಭದ್ರಾ ಕ್ರಸ್ಟ್ ಗೇಟ್ ಕುಸಿತ  
ರಾಜ್ಯ

ತುಂಗಭದ್ರಾ ಅಣೆಕಟ್ಟು ಗೇಟ್ ಅವಘಡ: ಜಲಾಶಯಕ್ಕೆ ತನಿಖಾ ತಂಡ ಭೇಟಿ, ಶೀಘ್ರದಲ್ಲೇ ವರದಿ ಸಲ್ಲಿಕೆ

ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಮಾಜಿ ಅಧ್ಯಕ್ಷ ಎ ಕೆ ಬಜಾಜ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಸೋಮವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊಸಪೇಟೆ: ತುಂಗಭದ್ರಾ ಅಣೆಗಟ್ಟಿನ ಕ್ರಸ್ಟ್ ಗೇಟ್ ತುಂಡಾಗಿ ಕಳಚಿ ಬಿದ್ದ ಘಟನೆಗೆ ಸಂಬಂಧಿಸಿದಂತೆ ತನಿಖಾ ತಂಡ ಸೋಮವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಮಾಜಿ ಅಧ್ಯಕ್ಷ ಎ ಕೆ ಬಜಾಜ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಸೋಮವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತನಿಖಾ ತಂಡದಲ್ಲಿ ಒಟ್ಟು 6 ಮಂದಿ ಸದಸ್ಯರಿದ್ದರು.

ಕ್ರೆಸ್ಟ್ ಗೇಟ್ ಸಂಖ್ಯೆ 19 ಒಡೆದು ನದಿಯಲ್ಲಿ ಕೊಚ್ಚಿಹೋದ ಘಟನೆಯ ನಂತರ ಹಲವು ಹಿರಿಯ ಎಂಜಿನಿಯರ್‌ಗಳು ಮತ್ತು ಅಣೆಕಟ್ಟುಗಳ ಹೈಡ್ರೋ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪರಿಣಿತ ಕನ್ನಯ್ಯ ನಾಯ್ಡು ಅವರು ಅಣೆಕಟ್ಟಿನ ಪ್ರಸ್ತುತ ಸ್ಥಿತಿಯನ್ನು ಅಧ್ಯಯನ ಮಾಡಲು ತುಂಗಭದ್ರಾ ಅಣೆಕಟ್ಟು ಮಂಡಳಿಗೆ ಸಲಹೆ ನೀಡಿದ್ದರು.

ತಜ್ಞರ ಸಲಹೆಯಂತೆ ಟಿಬಿ ಅಣೆಕಟ್ಟು ಮಂಡಳಿ ತಂಡ ರಚಿಸಿತ್ತು. ಇದರಂತೆ ತನಿಖಾ ತಂಡವು ಸೋಮವಾರ ಜಲಾಶಯಕ್ಕೆ ಭೇಟಿ ನೀಡಿ, ಡ್ಯಾಮ್ ಕ್ರೆಸ್ಟ್ ಗೇಟ್ ಘಟನೆಯ ಎಲ್ಲಾ ಮಾಹಿತಿಯನ್ನು ತಂಡ ಸಂಗ್ರಹಿಸಿದೆ.

ತನಿಖಾ ತಂಡದ ಅಧ್ಯಕ್ಷ ಎ ಕೆ ಬಜಾಜ್ ಮತ್ತು ಇತರ ಐವರು ಅಧಿಕಾರಿಗಳಉ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಸಂಖ್ಯೆ 19 ಗೆ ಭೇಟಿ ನೀಡಿದರು. ಈ ವೇಳೆ ಮಂಡಳಿಯು ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಮತ್ತು ಅಣೆಕಟ್ಟಿನ ಸಂಪೂರ್ಣ ಮಾಹಿತಿಯನ್ನು ತನಿಖಾ ತಂಡಕ್ಕೆ ಒದಗಿಸಿದೆ.

ವರದಿ ಸಲ್ಲಿಸಲು ತನಿಖಾ ತಂಡಕ್ಕೆ 15 ದಿನಗಳ ಕಾಲಾವಕಾಶವಿದೆ. ಸಾಧ್ಯವಾದಷ್ಟು ಬೇಗ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ನಂತರ ಸಮಿತಿಯ ಸಲಹೆಗಳನ್ನು ಸಿಡಬ್ಲ್ಯುಸಿಗೆ ರವಾನಿಸಲಾಗುವುದು. ಸಿಡಬ್ಲ್ಯುಸಿ ಸೂಚನೆಗಳನ್ನು ಪಾಲಿಸಲು ಸಿದ್ಧಸಿದ್ದೇವೆಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: '5.76 ಕೋಟಿ ಹಣ ಸೀಜ್, ತನಿಖೆಗೆ 11 ತಂಡ ರಚನೆ': ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್

G20 Summit: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜೊತೆಗೆ ಪ್ರಧಾನಿ ಮೋದಿಯ ಆತ್ಮೀಯತೆ! Video ವೈರಲ್

ಚಲಿಸುವ ರೈಲಿನೊಳಗೆ ಕೆಟಲ್‌ನಲ್ಲಿ ನೂಡಲ್ಸ್ ಬೇಯಿಸಿದ ಪ್ರಯಾಣಕಿ; ಕ್ರಮಕ್ಕೆ ಮುಂದಾದ ರೈಲ್ವೆ

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

'ಅಲ್ಲಾಹ್ ಕಿ ತರಫ್ ಸೇ ಗಿರ್ ಗಯಾ': ತೇಜಸ್ ಯುದ್ಧವಿಮಾನ ಪತನವಾಗುತ್ತಲೇ ನಗುತ್ತಾ ಪಾಕ್ ಪತ್ರಕರ್ತರ ವಿಕೃತಿ! Video

SCROLL FOR NEXT