ಸಂಗ್ರಹ ಚಿತ್ರ  
ರಾಜ್ಯ

ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿಟಿವಿ-ಡಿವಿಆರ್ ಮಾಯ!

ಮೈಸೂರಿನ ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ನಾಪತ್ತೆಯಾಗಿದೆ

ಮೈಸೂರು: ಮುಡಾ ಹಗರಣ ತನಿಖೆ ತೀವ್ರಗೊಂಡಿದ್ದು ಬಗೆದಷ್ಟು ಆಘಾತಕಾರಿ ಅಂಶಗಳು ಬಯಲಾಗುತ್ತಿವೆ. ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾ ತಂಡ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ. ಈ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ವಿಚಾರ ಬಯಲಾಗಿದೆ.

ಮೈಸೂರಿನ ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ನಾಪತ್ತೆಯಾಗಿದೆ. ಮೂಲಗಳ ಪ್ರಕಾರ, ಮುಡಾ ಆಯುಕ್ತರ ಅಧಿಕೃತ ನಿವಾಸವು 'ಗೃಹ' ಕಚೇರಿ ಎಂದು ಪರಿಗಣಿಸಲ್ಪಟ್ಟ ಕಾರಣ ವೀಡಿಯೊ ಸಾಕ್ಷ್ಯವನ್ನು ಹೊಂದಿದ್ದು, ಅಲ್ಲಿ ಸೂಕ್ಷ್ಮ ಸಭೆಗಳು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಮುಡಾದ ಕೆಲ ಅಧಿಕಾರಿಗಳು ಸಿಸಿಟಿವಿ ಮತ್ತು ಡಿವಿಆರ್ ಕೊಂಡೊಯ್ದಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಇದು ಡಿಜಿಟಲ್ ಸಾಕ್ಷ್ಯ ಆಗಬಹುದೆಂಬ ಕಾರಣಕ್ಕೆ ಅವರು ಸಾಕ್ಷ್ಯ ನಾಶಕ್ಕಾಗಿ ಇವನ್ನು ತೆರವು ಮಾಡಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಡಾದ ಹಾಲಿ ಆಯುಕ್ತರು, ಮುಡಾ ಕಟ್ಟಡ ನಿರ್ವಹಣೆ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ಮುಡಾ ಹಗರಣದಲ್ಲಿ ಅಧಿಕಾರಿಗಳು ಕೂಡ ಶಾಮೀಲಾಗಿರುವ ಅನುಮಾನ ಹೆಚ್ಚಾಗುತ್ತಿದ್ದು, ಸಾಕ್ಷಿಗಳನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದಾರ ಎನ್ನುವ ಅನುಮಾನ ಶುರುವಾಗಿದೆ. ಕಣ್ಮರೆಯಾದ ಡಿವಿಆರ್ ನಲ್ಲಿ ರಹಸ್ಯ ಸಭೆಗಳ ಪ್ರಮುಖ ದೃಶ್ಯದ ತುಣುಕನ್ನು ಸೆರೆಹಿಡಿದಿದೆ ಎಂದು ನಂಬಲಾಗಿದೆ, ಕಣ್ಗಾವಲು ವ್ಯವಸ್ಥೆಯನ್ನು ತೆಗೆದುಹಾಕುವ ಬಗ್ಗೆ ಎಚ್ಚರಿಕೆಯನ್ನು ಮೂಡಿಸುತ್ತದೆ. ಸಿಸಿಟಿವಿ ಕ್ಯಾಮೆರಾಗಳು ಒಮ್ಮೆ ನೆಲೆಗೊಂಡಿದ್ದ ಸ್ಥಳದಲ್ಲಿ ತಂತಿಗಳು ಕತ್ತರಿಸಿದ್ದು ಪ್ರಮುಖ ಸಾಕ್ಷ್ಯವನ್ನು ಅಳಿಸಲು ಉದ್ದೇಶಪೂರ್ವಕವಾಗಿ ಉಪಕರಣಗಳನ್ನು ಕಿತ್ತುಹಾಕಿರಬಹುದು ಎಂದು ಶಂಕಿಸಲಾಗಿದೆ. ತನಿಖೆಯು ಈಗ ನಿರ್ಣಾಯಕ ಹಂತದಲ್ಲಿದೆ, ಪ್ರಮುಖ ಸಾಕ್ಷ್ಯಗಳ ಕಣ್ಮರೆಯು ಇಡೀ ಮುಡಾ ಹಗರಣದ ಮೇಲೆ ಕರಿ ಛಾಯೆ ಮೂಡಿಸಿದೆ, ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿದ್ದ 8 ಸಿಸಿ ಕ್ಯಾಮೆರಾಗಳು ಹಾಗೂ ಡಿವಿಆರ್ ಅನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದು, ಹಿಂದಿನ ಆಯುಕ್ತರೇ ಅವುಗಳನ್ನು ಕೊಂಡೊಯ್ದಿರುವ ಬಗ್ಗೆ ಅನುಮಾನ ಶುರುವಾಗಿದೆ. ಜೊತೆಗೆ ಅಧಿಕಾರಿಗಳು ಡಿಜಿಟಲ್ ಸಾಕ್ಷಿ ನಾಶಕ್ಕೆ ಮುಂದಾಗಿದ್ದಾರೆಯೇ? ಎನ್ನುವ ಪ್ರಶ್ನೆ ಮೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT