ಸಂಗ್ರಹ ಚಿತ್ರ  
ರಾಜ್ಯ

ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿಟಿವಿ-ಡಿವಿಆರ್ ಮಾಯ!

ಮೈಸೂರಿನ ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ನಾಪತ್ತೆಯಾಗಿದೆ

ಮೈಸೂರು: ಮುಡಾ ಹಗರಣ ತನಿಖೆ ತೀವ್ರಗೊಂಡಿದ್ದು ಬಗೆದಷ್ಟು ಆಘಾತಕಾರಿ ಅಂಶಗಳು ಬಯಲಾಗುತ್ತಿವೆ. ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾ ತಂಡ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ. ಈ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ವಿಚಾರ ಬಯಲಾಗಿದೆ.

ಮೈಸೂರಿನ ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ನಾಪತ್ತೆಯಾಗಿದೆ. ಮೂಲಗಳ ಪ್ರಕಾರ, ಮುಡಾ ಆಯುಕ್ತರ ಅಧಿಕೃತ ನಿವಾಸವು 'ಗೃಹ' ಕಚೇರಿ ಎಂದು ಪರಿಗಣಿಸಲ್ಪಟ್ಟ ಕಾರಣ ವೀಡಿಯೊ ಸಾಕ್ಷ್ಯವನ್ನು ಹೊಂದಿದ್ದು, ಅಲ್ಲಿ ಸೂಕ್ಷ್ಮ ಸಭೆಗಳು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಮುಡಾದ ಕೆಲ ಅಧಿಕಾರಿಗಳು ಸಿಸಿಟಿವಿ ಮತ್ತು ಡಿವಿಆರ್ ಕೊಂಡೊಯ್ದಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಇದು ಡಿಜಿಟಲ್ ಸಾಕ್ಷ್ಯ ಆಗಬಹುದೆಂಬ ಕಾರಣಕ್ಕೆ ಅವರು ಸಾಕ್ಷ್ಯ ನಾಶಕ್ಕಾಗಿ ಇವನ್ನು ತೆರವು ಮಾಡಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಡಾದ ಹಾಲಿ ಆಯುಕ್ತರು, ಮುಡಾ ಕಟ್ಟಡ ನಿರ್ವಹಣೆ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ಮುಡಾ ಹಗರಣದಲ್ಲಿ ಅಧಿಕಾರಿಗಳು ಕೂಡ ಶಾಮೀಲಾಗಿರುವ ಅನುಮಾನ ಹೆಚ್ಚಾಗುತ್ತಿದ್ದು, ಸಾಕ್ಷಿಗಳನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದಾರ ಎನ್ನುವ ಅನುಮಾನ ಶುರುವಾಗಿದೆ. ಕಣ್ಮರೆಯಾದ ಡಿವಿಆರ್ ನಲ್ಲಿ ರಹಸ್ಯ ಸಭೆಗಳ ಪ್ರಮುಖ ದೃಶ್ಯದ ತುಣುಕನ್ನು ಸೆರೆಹಿಡಿದಿದೆ ಎಂದು ನಂಬಲಾಗಿದೆ, ಕಣ್ಗಾವಲು ವ್ಯವಸ್ಥೆಯನ್ನು ತೆಗೆದುಹಾಕುವ ಬಗ್ಗೆ ಎಚ್ಚರಿಕೆಯನ್ನು ಮೂಡಿಸುತ್ತದೆ. ಸಿಸಿಟಿವಿ ಕ್ಯಾಮೆರಾಗಳು ಒಮ್ಮೆ ನೆಲೆಗೊಂಡಿದ್ದ ಸ್ಥಳದಲ್ಲಿ ತಂತಿಗಳು ಕತ್ತರಿಸಿದ್ದು ಪ್ರಮುಖ ಸಾಕ್ಷ್ಯವನ್ನು ಅಳಿಸಲು ಉದ್ದೇಶಪೂರ್ವಕವಾಗಿ ಉಪಕರಣಗಳನ್ನು ಕಿತ್ತುಹಾಕಿರಬಹುದು ಎಂದು ಶಂಕಿಸಲಾಗಿದೆ. ತನಿಖೆಯು ಈಗ ನಿರ್ಣಾಯಕ ಹಂತದಲ್ಲಿದೆ, ಪ್ರಮುಖ ಸಾಕ್ಷ್ಯಗಳ ಕಣ್ಮರೆಯು ಇಡೀ ಮುಡಾ ಹಗರಣದ ಮೇಲೆ ಕರಿ ಛಾಯೆ ಮೂಡಿಸಿದೆ, ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿದ್ದ 8 ಸಿಸಿ ಕ್ಯಾಮೆರಾಗಳು ಹಾಗೂ ಡಿವಿಆರ್ ಅನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದು, ಹಿಂದಿನ ಆಯುಕ್ತರೇ ಅವುಗಳನ್ನು ಕೊಂಡೊಯ್ದಿರುವ ಬಗ್ಗೆ ಅನುಮಾನ ಶುರುವಾಗಿದೆ. ಜೊತೆಗೆ ಅಧಿಕಾರಿಗಳು ಡಿಜಿಟಲ್ ಸಾಕ್ಷಿ ನಾಶಕ್ಕೆ ಮುಂದಾಗಿದ್ದಾರೆಯೇ? ಎನ್ನುವ ಪ್ರಶ್ನೆ ಮೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!