ಜಲಾಶಯದ ಬಳಿ ಫೋಟೋಶೂಟ್ ನಡೆಸಿರುವುದು. 
ರಾಜ್ಯ

ತುಂಗಭದ್ರಾ ಜಲಾಶಯದ ಆವರಣದಲ್ಲಿ ಜೋಡಿಗಳ ಪ್ರೀ-ವೆಡ್ಡಿಂಗ್ ಫೋಟೋಶೂಟ್: ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿ

ಕಾರನ್ನು ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿ ಕಾರಿನ ಮೇಲೆ, ಕಾರಿನ ಮುಂಭಾಗ ಜೋಡಿಗಳ ಫೋಟೋಶೂಟ್ ಮಾಡಲಾಗಿದೆ.

ಕೊಪ್ಪಳ: ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಬಳಿ ಯಾವುದೇ ರೀತಿಯ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೆ, ಇತ್ತೀಚೆಗೆ ನವಜೋಡಿಯೊಂದು ತುಂಗಭದ್ರಾ ಜಲಾಶಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದು ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾರನ್ನು ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿ ಕಾರಿನ ಮೇಲೆ, ಕಾರಿನ ಮುಂಭಾಗ ಜೋಡಿಗಳ ಫೋಟೋಶೂಟ್ ಮಾಡಲಾಗಿದೆ. ಈ ಫೋಟೋಗಳಪ ವೈರಲ್ ಆಗಿದ್ದು, ನಿಷೇಧವಿದ್ದರೂ ಟಿಬಿ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋಶೂಟ್ ಗೆ ಅನುಮತಿ ನೀಡಿದ್ದು ಯಾರು? ಅಧಿಕಾರಿಗಳೇ ಅನುಮತಿ ನೀಡಿದ್ದಾರಾ? ಬಿಗಿ ಭದ್ರತೆ ನಡುವಲ್ಲೂ ಈ ಜೋಡಿ ಒಳಗೆ ಹೋಗಿದ್ದು ಹೇಗೆ ಎಂಬುದರ ಬಗ್ಗೆ ಪ್ರಶ್ನೆಗಳು ಮೂಡಿವೆ.

ಅಂತಾರಾಷ್ಟ್ರೀಯ ಉಗ್ರಗಾಮಿಗಳ ಕಣ್ಣು ಜಲಾಶಯಗಳ ಮೇಲೆ ಇರುವುದರಿಂದ ತುಂಗಭದ್ರಾ ಜಲಾಶಯ, ಅಣೆಕಟ್ಟೆ ಮೇಲೆಯೂ ಪ್ರವೇಶಕ್ಕೆ ನಿರ್ಬಂಧವಿದೆ. ಪತ್ರಕರ್ತರು ಸೇರಿದಂತೆ ಯಾರಿಗೂ ಹೋಗಲು ಆವಕಾಶವಿಲ್ಲ. ವಿಶೇಷ ಸಂದರ್ಭದಲ್ಲಿ ಮಾತ್ರ ಸಚಿವರು, ಅಧಿಕಾರಿಗಳಿಗೆ ಪ್ರವೇಶ ನೀಡಲಾಗುತ್ತದೆ. ಬಾಗಿನ ಅರ್ಪಿಸುವ ವೇಳೆಯಲ್ಲಿ ಕಟ್ಟೆಚ್ಚರದ ನಡುವೆ ಅವಕಾಶ ನೀಡಲಾಗುತ್ತಿದೆ. ಆದರೂ, ಈ ನವಜೋಡಿ ಸ್ಥಳದಲ್ಲಿ ಫೋಟೋಶೂಟ್ ಮಾಡಿಸಿದ್ದರ ಕುರಿತು ಹಲವರು ಹುಬ್ಬೇರಿಸಿದ್ದು, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ತುಂಗಭದ್ರಾ ಜಲಾಶಯ ಕ್ರೆಸ್ಟ್ ಗೇಟ್ ನಂ.19 ಮುರಿದು ಬಿದ್ದ ಘಟನೆ ಬಳಿಕ ಸರ್ಕಾರ ಹಾಗೂ ರೈತರು ನೀರಿನ ಸಂಗ್ರಹ ಬಗ್ಗೆ ಚಿಂತಿತರಾಗಿದ್ದರು. ಇದೀಗ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಸ್ಥಳೀಯರು ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಲ್ಲದೆ, ಫೋಟೋಶೂಟ್ ನಡೆಸಿದ ಜೋಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಈ ನಡುವೆ ಘಟನೆ ಕುರಿತು ತನಿಖೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

AIADMKಯಿಂದ ಮತ್ತಷ್ಟು ಫ್ರೀಬೀಸ್ ಘೋಷಣೆ; ಪ್ರತಿ ಕುಟುಂಬಕ್ಕೆ 10,000 ರೂ. ನೆರವು!

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ; 15 ಲಕ್ಷ ರೂ ಪರಿಹಾರ ಘೋಷಣೆ

SCROLL FOR NEXT