ಲೋಕಾಯುಕ್ತ ಕಚೇರಿ 
ರಾಜ್ಯ

2017ರ ನಿವೇಶನ ಹಂಚಿಕೆ ಹಗರಣ: 18 ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯದರ್ಶಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳೊಳಗೆ ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿರುವ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಪ್ರಭಾವಿ ವ್ಯಕ್ತಿಗಳಿಗೆ 2017 ರಲ್ಲಿ 350 ನಿವೇಶನ ಹಂಚಿಕೆ ಆರೋಪದ ಮೇಲೆ ಲೋಕಾಯುಕ್ತ 18 ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯದರ್ಶಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳೊಳಗೆ ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಜಯನಗರ ಎರಡನೇ ಹಂತದ ಸರ್ವೆ ನಂಬರ್ 89ಕ್ಕೆ ಅತಿಕ್ರಮ ಪ್ರವೇಶ ಮಾಡಿ 7.18 ಎಕರೆ ಒತ್ತುವರಿ ಮಾಡಿ 25 x 25 ಅಡಿ ಅಳತೆಯ ನಿವೇಶನಗಳನ್ನು ಯಾವುದೇ ಅನುಮತಿಯಿಲ್ಲದೆ ಅಭಿವೃದ್ಧಿಪಡಿಸಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿ ಹಿನಕಲ್ ಪಂಚಾಯಿತಿ ಅಧ್ಯಕ್ಷ ಕೃಷ್ಣಮಾದೇಗೌಡ, ಕಾರ್ಯದರ್ಶಿ ಹಾಗೂ ಇತರರು ಆರ್‌ಟಿಐ ಕಾರ್ಯಕರ್ತ ಗಂಗರಾಜು ದೂರು ದಾಖಲಿಸಿದ್ದಾರೆ.

ಅಲ್ಲದೆ ಬಿಇಎಂಎಲ್ ನೌಕರರು, ಶಿಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಂಚೆ ಕಚೇರಿ ಹಾಗೂ ಸರಕಾರಿ ಪತ್ರಿಕಾ ನೌಕರರು, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಬಳಿಕ ಗಂಗರಾಜು ಅವರು ಮುಡಾ ಸೈಟ್‌ಗಳನ್ನು ಹಿಂಪಡೆಯುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮನವಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ 2017ರಲ್ಲಿ ಎಫ್‌ಐಆರ್‌ ದಾಖಲಿಸಲು ಅನುಮೋದನೆ ನೀಡಿತ್ತು. ನಂತರ, ಆಸ್ತಿ ರಕ್ಷಣೆಯಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣವನ್ನು 2022ರಲ್ಲಿ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!