ಸಂಗ್ರಹ ಚಿತ್ರ 
ರಾಜ್ಯ

ಇಂದು ಸಿಎಂ ನಗರ ಪ್ರದಕ್ಷಿಣೆ: ಅಭಿವೃದ್ಧಿ ಕಾರ್ಯಗಳ ಪರಿಶೀಲನೆ

ಗೃಹ ಕಚೇರಿ ಕೃಷ್ಣಾದಿಂದ ಬೆಳಗ್ಗೆ 11.30ಕ್ಕೆ ಹೊರಡಲಿರುವ ಸಿಎಂ ನೇತೃತ್ವದ ಸಚಿವರು ಹಾಗೂ ಶಾಸಕರು ತಂಡ ಹಲವು ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನಗರ ಪ್ರದಕ್ಷಿಣೆ ಕೈಗೊಳ್ಳಲಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಿಂದ ಬೆಳಗ್ಗೆ 11.30ಕ್ಕೆ ಹೊರಡಲಿರುವ ಸಿಎಂ ನೇತೃತ್ವದ ಸಚಿವರು ಹಾಗೂ ಶಾಸಕರು ತಂಡ ಹಲವು ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ.

ಮುಖ್ಯಮಂತ್ರಿಗಳು ರಾಜಕಾಲುವೆಗಳು, ರಸ್ತೆ ಗುಂಡಿಗಳ ಪರಿಶೀಲನೆ ನಡೆಸಲಿದ್ದಾರೆ. ಇದಲ್ಲದೇ ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ವೀಕ್ಷಣೆಯನ್ನೂ ಮಾಡಲಿದ್ದಾರೆ. ನಗರ ಪ್ರದಕ್ಷಿಣೆಗೂ ಮುನ್ನ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ 100 ಹೊಸ ಬಿಎಸ್‌6 ಬಿಎಂಟಿಸಿ ಬಸ್‌ಗಳಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯ ಸರ್ಕಾರವು 336 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 840 ಹೊಸ ಬಸ್‌ಗಳನ್ನು ಖರೀದಿಗೆ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ 100 ಬಿಎಸ್ 6 ಬಸ್ಸುಗಳು ನಗರಕ್ಕೆ ಆಗಮಿಸಿವೆ.

ಹೊಸ ಬಸ್‌ಗಳನ್ನು ಹೆಚ್ಚು ಪ್ರಯಾಣಿಕರ ದಟ್ಟಣೆ ಇರುವ ಪ್ರದೇಶಗಳಲ್ಲಿ ಓಡಿಸಲು ನಿರ್ಧರಿಸಲಾಗಿದೆ. ಪ್ರಮುಖವಾಗಿ ಮೆಜೆಸ್ಟಿಕ್‌, ಕೆಆರ್‌ ಮಾರುಕಟ್ಟೆ, ಯಶವಂತಪುರ, ರಾಜಾಜಿನಗರ, ಮೈಸೂರು ರಸ್ತೆ, ಕೆಆರ್‌ ಪುರ ನಿಲ್ದಾಣಗಳಿಂದ ನಗರದ ಹೊರ ಭಾಗಗಗಳಿಗೆ ಹಾಗೂ ನಗರದ ಪ್ರಮುಖ ಸ್ಥಳಗಳಿಗೆ ಹೊಸ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು- ಸದ್ಗುರು

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?