ಸಾಂದರ್ಭಿಕ ಚಿತ್ರ 
ರಾಜ್ಯ

Google ​ಸರ್ಚ್ ಮಾಡಿ ದೇವಸ್ಥಾನಗಳ ಲೂಟಿ; ಜೈಲು ವಾರ್ಡನ್ ಸೇರಿ ಮೂವರ ಬಂಧನ; 46.22 ಲಕ್ಷ ರೂ ಮೌಲ್ಯದ ವಸ್ತು ವಶಕ್ಕೆ

ಜೈಲಿನಲ್ಲಿ ವಾರ್ಡನ್‌ ಆಗಿದ್ದಾಗ ಕಳ್ಳರನ್ನು ಪರಿಚಯಿಸಿಕೊಂಡು ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಹಾವೇರಿ, ತುಮಕೂರು ಮತ್ತು ಗದಗ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ದೇವಸ್ಥಾನದಲ್ಲಿ ಕಳವು ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಗದಗ: ಗೂಗಲ್ ನಲ್ಲಿ ಸರ್ಚ್ ಮಾಡಿಕೊಂಡು ದೇವಾಲಯಗಳ ಲೂಟಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ರಾಣೆಬೆನ್ನೂರಿನ ಪ್ರಸಾದ (28), ಪ್ರದೀಪ್‌ (24) ಮತ್ತು ಶ್ರೀಕಾಂತ (29) ಬಂಧಿತರು. ದೇವಸ್ಥಾನಗಳನ್ನು ಗುರುತಿಸಿ, ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ಆರೋಪಿ ಶ್ರೀಕಾಂತ ಜೈಲಿನ ವಾರ್ಡನ್‌ ಆಗಿದ್ದು, ಸದ್ಯ ಅಮಾನತಿನಲ್ಲಿದ್ದಾನೆ.

ಜೈಲಿನಲ್ಲಿ ವಾರ್ಡನ್‌ ಆಗಿದ್ದಾಗ ಕಳ್ಳರನ್ನು ಪರಿಚಯಿಸಿಕೊಂಡು ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಹಾವೇರಿ, ತುಮಕೂರು ಮತ್ತು ಗದಗ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ದೇವಸ್ಥಾನದಲ್ಲಿ ಕಳವು ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಒಂದೇ ಕುಟುಂಬದ ಮೂವರು (ಪ್ರದೀಪ್, ರಮೇಶ್, ಪ್ರಸಾದ್) ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದರು. ಈ ವೇಳೆ ಜೈಲಿನ ವಾರ್ಡನ್ ಆಗಿದ್ದ ಶ್ರೀಕಾಂತ್ ಬೇಲ್ ಮೇಲೆ ಮೂವರನ್ನು ಬಿಡಿಸಿದ್ದ. ನಂತರ ಮೂವರೂ ಶ್ರೀಕಾಂತ್ ಸೂಚನೆ ಮೇರೆಗೆ ಕಳ್ಳತನ ಮಾಡಿ ಅದನ್ನು ಆತನಿಗೆ ನೀಡುತ್ತಿದ್ದರು. ಶ್ರೀಕಾಂತ್ ತನ್ನ ಜವಾಬ್ದಾರಿ ಮರೆತು ಈ ಗ್ಯಾಂಗ್'ನ ಲೀಡರ್ ಆಗದ್ದ. ಈತ ಗೂಗಲ್ ನಲ್ಲಿ ಸರ್ಜ್ ಮಾಡಿ, ಪ್ಲಾನ್ ಹಾಕಿಕೊಡುತ್ತಿದ್ದ. ಈತನ ಮಾರ್ಗದರ್ಶನದಂತೆಯೇ ಮೂವರೂ ದರೋಡೆ ಮಾಡುತ್ತಿದ್ದರು.

ಈ ನಡುವೆ ಮೂವರು ಕಳ್ಳರೂ ಶ್ರೀಕಾಂತ್ ಜೊತೆಗೂಡಿ ಎಣ್ಣೆ ಮಾಡುತ್ತಿದ್ದರು ಈ ವೇಳೆ ಜಗಳವಾಗಿದ್ದು, ನಿಮ್ಮ ವಿಚಾರವನ್ನು ಪೊಲೀಸರಿಗೆ ತಿಳಿಸುತ್ತೇನೆಂದು ರಮೇಶ್ ಹೇಳಿದ್ದಾನೆ. ಇದರಿಂದ ಸಿಟ್ಟಾಗಿರುವ ಇತರರು ರಮೇಶ್ ತಲೆಗೆ ಕಲ್ಲಿನಿಂದ ಹೊಡೆದು, ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಯಾರಿಗೂ ತಿಳಿಯದಂತೆ ಶವವನ್ನು ಹೂತಿಹಾಕಿದ್ದಾರೆ. ಕೊಲೆಯಾಗಿ ಒಂದು ವರ್ಷವಾದರೂ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ. ಆರೋಪಿಗಳ ಬಂಧನದ ಬಳಿ ಹತ್ಯೆ ಪ್ರಕರಣವೂ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನಲ್ಲಿ ಕೊಲೆ ಮಾಡಿ ಲೇಔಟ್ ವೊಂದಲ್ಲಿ ಮುಚ್ಚಿಹಾಕಿರುವುದಾಗಿ ಆರೋಪಿಗಳು ಹೇಳಿದ್ದಾರೆ.

ಇತ್ತೀಚೆಗೆ ಶಿರಹಟ್ಟಿ ತಾಲೂಕಿನ ಹೊಳೆಲಮ್ಮ ದೇವಸ್ಥಾನ, ಅಂಬಾ ಭವಾನಿ ದೇವಸ್ಥಾನ ಹಾಗೂ ಬನ್ನಿಕೊಪ್ಪ ದೇವಸ್ಥಾನವನ್ನು ಮೂವರು ಲೂಟಿ ಮಾಡಿದ್ದರು. ತನಿಖೆ ಆರಂಭಿಸಿದ ಲಕ್ಷ್ಮೇಶ್ವರ ಪೊಲೀಸರು ದೇವಸ್ಥಾನದ ಆವರಣದಲ್ಲಿರುವ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಮೂವರನ್ನು ಬಂಧಿಸಿದ್ದಾರೆ. ಈ ಬಂಧನದಿಂದ 15 ದೇವಸ್ಥಾನ ಕಳವು ಪ್ರಕರಣಗಳನ್ನು ಭೇದಿಸಿದ್ದಾರೆ.

ಪೊಲೀಸರು ಆರೋಪಿಗಳಿಂದ ಚಿನ್ನ, ಬೆಳ್ಳಿಯ ವಸ್ತುಗಳು, ನಗದು ಸೇರಿದಂತೆ 46 ಲಕ್ಷ ಮೊತ್ತದ ಚಿನ್ನ, ಬೆಳ್ಳಿ, ವಾಹನಗಳು ಜಪ್ತಿ ಮಾಡಲಾಗಿದೆ. ಅಷ್ಟೇ ಅಲ್ಲ ಕೃತ್ಯಕ್ಕೆ ಬಳಸಲಾದ ಕಟರ್, ಸೇರಿ ಹಲವು ವಸ್ತುಗಳನ್ನೂ ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT