ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 
ರಾಜ್ಯ

ನಾಗಮಂಗಲ ಗಲಭೆ: ತನಿಖೆಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಒತ್ತಾಯ

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಿಂದೂ ವಿರೋಧಿ ಪಿತೂರಿಯಲ್ಲಿ ತೊಡಗಿದ್ದಾರೆ. ನಿನ್ನೆ ದಿನ ನಾಗಮಂಗಲದಲ್ಲಿ ನಡೆದಿರುವ ಘಟನೆಯಲ್ಲಿ ಹಿಂದೂಗಳು, ನಮ್ಮ ಗಣಪನನ್ನು ಅವಮಾನಿಸಲಾಗಿದೆ.

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದಿರುವ ಕೋಮು ಗಲಭೆಯ ತನಿಖೆಗೆ ಗುರುವಾರ ಒತ್ತಾಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಿಂದೂ ವಿರೋಧಿ ಪಿತೂರಿಯಲ್ಲಿ ತೊಡಗಿದ್ದಾರೆ. ನಿನ್ನೆ ದಿನ ನಾಗಮಂಗಲದಲ್ಲಿ ನಡೆದಿರುವ ಘಟನೆಯಲ್ಲಿ ಹಿಂದೂಗಳು, ನಮ್ಮ ಗಣಪನನ್ನು ಅವಮಾನಿಸಲಾಗಿದೆ. ಕಲ್ಲು ತೂರಾಟ ನಡೆಸಿದ್ದು, ಚಪ್ಪಲಿ ಎಸೆಯಲಾಗಿದೆ ಎಂದು ಆರೋಪಿಸಿದರು.

ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರೂ ರಾಜ್ಯ ಸರ್ಕಾರ ಸಣ್ಣ ಘಟನೆ ಎಂದು ಹೇಳುತ್ತಿದೆ. ಕೋಮು ಗಲಭೆ ಕುರಿತು ಕೂಡಲೇ ತನಿಖೆ ನಡೆಯಬೇಕು, NIA ಕೂಡಾ ತನಿಖೆಯಲ್ಲಿ ತೊಡಗಿಸಿಕೊಳ್ಳಬೇಕು, ಆಗ ಮಾತ್ರ ಸತ್ಯ ಹೊರಬರಲು ಸಾಧ್ಯ ಎಂದರು.

ಬುಧವಾರ ಬದರಿಕೊಪ್ಪಲಿನಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದ್ದು, ದುಷ್ಕರ್ಮಿಗಳ ಗುಂಪು ಅಂಗಡಿ, ಅಂಗಡಿ ಮುಂದಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್