ಡಾ ಜಿ ಪರಮೇಶ್ವರ್  
ರಾಜ್ಯ

ಒತ್ತಡಕ್ಕೆ ಮಣಿದ ಸರ್ಕಾರ: ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 PSI ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ದಿನಾಂಕ ಪ್ರಕಟ ಎಂದ ಗೃಹ ಸಚಿವ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು.

ಬೆಂಗಳೂರು: ಪ್ರತಿಭಟನೆ ಮತ್ತು ಬೇಡಿಕೆಗಳಿಗೆ ಮಣಿದ ಸರ್ಕಾರ ಸೆಪ್ಟೆಂಬರ್ 28ರಂದು ನಡೆಸಬೇಕಿದ್ದ 402 ಪಿಎಸ್ಐ ಹುದ್ದೆಗಳ ಪರೀಕ್ಷೆಯನ್ನು ಕೊನೆಗೂ ಮುಂದೂಡಿದೆ. ಈ ಮೂಲಕ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ.

ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ, ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಚಿವರು, ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಯುಪಿಎಸ್​ಸಿ ಮುಖ್ಯ ಪರೀಕ್ಷೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು. ಸೆ.28ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು.

ಮಂಗಳವಾರವಷ್ಟೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಹಾಗೂ ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ನಿಯೋಗ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಅವರನ್ನು ಭೇಟಿಯಾಗಿ ಪರೀಕ್ಷೆ ಮುಂದೂಡಿಕೆಗೆ ಮನವಿ ಮಾಡಿತ್ತು. ಆಗ ಸಚಿವರು ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT