ಸಿದ್ದರಾಮಯ್ಯ 
ರಾಜ್ಯ

ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ರಾಜ್ಯಪಾಲರು ಉಲ್ಲೇಖಿಸಿಲ್ಲ: ಹೈಕೋರ್ಟ್‌ನಲ್ಲಿ ಸಿಂಘ್ವಿ

ಹೈಕೋರ್ಟ್‌ನಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಅಭಿಷೇಕ್​ ಮನು ಸಿಂಘ್ವಿ ಅವರು, ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ರಾಜ್ಯಪಾಲರು ಉಲ್ಲೇಖಿಸಿಲ್ಲ ಎಂದರು.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್​ ಅರ್ಜಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್, ತೀರ್ಪ ಕಾಯ್ದಿರಿಸಿದೆ.

ಹೈಕೋರ್ಟ್‌ನಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಅಭಿಷೇಕ್​ ಮನು ಸಿಂಘ್ವಿ ಅವರು, ತಮ್ಮ ಪತ್ನಿ ಪಾರ್ವತಿ ಬಿಎಂ ಅವರಿಗೆ ಅಕ್ರಮವಾಗಿ ಪರಿಹಾರದ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರವೇನು ಮತ್ತು ಹೇಗೆ ಎಂಬುದನ್ನು ರಾಜ್ಯಪಾಲರು ಉಲ್ಲೇಖಿಸಿಲ್ಲ ಮತ್ತು ಯಾವುದೇ ಕಾರಣಗಳನ್ನು ನೀಡದೆ ಹಾಗೂ ತನಿಖೆ ಇಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗಂಭೀರ ಸಾಂವಿಧಾನಿಕ ಪಾಪವನ್ನು ಮಾಡಿದ್ದಾರೆ ಎಂದರು.

ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ರಕ್ಷಣೆಯನ್ನು ವಿಸ್ತರಿಸದಿದ್ದರೆ ಚುನಾಯಿತ ಸರ್ಕಾರ ಪತನವಾಗುವ ಸಾಧ್ಯತೆಗಳಿವೆ ಎಂದು ಸಿಂಘ್ವಿ ಆತಂಕ ವ್ಯಕ್ತಪಡಿಸಿದರು.

''ಮುಖ್ಯಮಂತ್ರಿಗಳ ವಿರುದ್ಧ ಯಾಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದೇನೆ ಎಂಬುದಕ್ಕೆ ಉತ್ತರವಿಲ್ಲ. ಶೂನ್ಯ ಉತ್ತರದೊಂದಿಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಹೇಗೆ, ಯಾವ ನಿರ್ಧಾರ, ಶಿಫಾರಸು ಮೂಲಕ ಪ್ರಭಾವ ಬೀರಿದ್ದಾರೆ. ಇದ್ಯಾವುದನ್ನೂ ರಾಜ್ಯಪಾಲರು ತಮ್ಮ ಆದೇಶದಲ್ಲಿ ಉಲ್ಲೇಖಿಸಿಲ್ಲ. ರಾಜ್ಯಪಾಲರ ಆದೇಶದಲ್ಲಿಯೂ ಅವರು ಪರಿಶೀಲಿಸಿದ ಕಡತಗಳ ಉಲ್ಲೇಖವಿಲ್ಲ. ಇಂತಹ ಟಿಪ್ಪಣಿಗಳ ಆಧಾರದ ಮೇಲೆ ನಿರ್ಧಾರ ಕೈಗೊಂಡಿದ್ದೇನೆ ಎಂದಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ ಬಗ್ಗೆಯೂ ಉಲ್ಲೇಖಿಸಿಲ್ಲ. ಪ್ರಕರಣದಲ್ಲಿ ಸಿದ್ದರಾಮಯ್ಯ ಪಾತ್ರ ಏನು ಎಂಬುದನ್ನು ರಾಜ್ಯಪಾಲರು ತಿಳಿಸಿಲ್ಲ'' ಎಂದು ಸಿಂಘ್ವಿ ವಾದ ಮಂಡಿಸಿದರು.

ಮೂರನೇ ವ್ಯಕ್ತಿಗಳು ಸಲ್ಲಿಸಿದ ರಾಜಕೀಯ ಪ್ರೇರಿತ ದೂರುಗಳನ್ನು ಸ್ವೀಕರಿಸಿ ಏಕಪಕ್ಷೀಯವಾಗಿ ರಾಜ್ಯಪಾಲರ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಸಹಜ ನ್ಯಾಯ ಪ್ರಕ್ರಿಯೆಯನ್ನು ಪಾಲಿಸಿಲ್ಲ. ಪ್ರಕರಣ ಸಂಬಂಧ ಮೂರು ಮನವಿಗಳು ಬಂದಿವೆ. ಒಂದು ಮನವಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಮತ್ತಿಬ್ಬರ ದೂರಿನ ಕುರಿತು ಶೋಕಾಸ್ ನೋಟಿಸ್ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಯಾವುದೇ ದೂರಿಗೂ ಶೋಕಾಸ್ ನೋಟಿಸ್ ನೀಡಿಲ್ಲದಿದ್ದರೆ ಅಗತ್ಯವಿಲ್ಲವೆನ್ನಬಹುದಿತ್ತು. ಒಬ್ಬರ ದೂರಿಗೆ ನೀಡಿ, ಇಬ್ಬರ ದೂರಿಗೆ ಶೋಕಾಸ್ ನೋಟಿಸ್ ನೀಡಿಲ್ಲ. ಅಲ್ಲದೇ, ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಉಳಿದವರಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿಲ್ಲ. ಶಶಿಕಲಾ ಜೊಲ್ಲೆ ಪ್ರಕರಣದಲ್ಲಿ ತಿರಸ್ಕರಿಸಲಾಗಿದೆ, ಮುರುಗೇಶ್ ನಿರಾಣಿ ಪ್ರಕರಣದಲ್ಲಿ ಸ್ಪಷ್ಟನೆ ಕೇಳಿ ಹಿಂತಿರುಗಿಸಲಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಕರಣವನ್ನು ಹಿಂತಿರುಗಿಸಲಾಗಿದೆ'' ಎಂದು ವಿವರಿಸಿದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಮ್ಯಾರಥಾನ್ ವಾದಗಳ ನಂತರ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರು ಗುರುವಾರ ಆದೇಶವನ್ನು ಕಾಯ್ದಿರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT