ಇಂದಿರಾ ಕ್ಯಾಂಟೀನ್ ನಲ್ಲಿ ಜೋಳದ ರೊಟ್ಟಿ ಸವಿದ ಸಚಿವ ಸಂತೋಷ್ ಲಾಡ್ 
ರಾಜ್ಯ

ಇಂದಿರಾ ಕ್ಯಾಂಟೀನ್‌ 'ಹೊಸ ಮೆನು'ಗೆ ಸಚಿವ ಸಂತೋಷ್ ಲಾಡ್ ಚಾಲನೆ

ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ.

ಧಾರವಾಡ: ಇಂದಿರಾ ಕ್ಯಾಂಟೀನ್‍ನ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಬುಧವಾರ ಚಾಲನೆ ನೀಡಿದರು.

ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ನಲ್ಲಿ ಸಂತೋಷ್ ಲಾಡ್ ಅವರು ಹೊಸ ಆಹಾರ ಪಟ್ಟಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಮಹತ್ವದ ಕೊಡುಗೆಯಾಗಿದೆ. ಜಿಲ್ಲೆಯ ಅವಳಿ ನಗರದಲ್ಲಿ 9 ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ಇಂದಿರಾ ಕ್ಯಾಂಟೀನ್‍ದಿಂದ ಪ್ರತಿದಿನ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ. ಅದರಂತೆ ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಬಳಿಕ ಸಚಿವರು ಐದು ರೂ. ಹಣ ಕೊಟ್ಟು ಟೋಕನ್ ಖರೀದಿಸಿ, ಜೋಳದ ರೊಟ್ಟಿ ಊಟ ಸವಿದರು. ಈ ಸಂದರ್ಭದಲ್ಲಿ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಪಾಲಿಕೆ ಸದಸ್ಯ ಡಾ.ಮಯೂರ ಮೋರೆ, ಸೇರಿದಂತೆ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT