ಬಂಧನಕ್ಕೊಳಗಾಗಿರುವ ಮಾಜಿ ಶಾಸಕ ಮುನಿರತ್ನ online desk
ರಾಜ್ಯ

ಬಂಧನಕ್ಕೊಳಗಾದ ಮುನಿರತ್ನ ವೈದ್ಯಕೀಯ ಪರೀಕ್ಷೆ ಅಂತ್ಯ; ಅಶೋಕ್​​ನಗರ ಠಾಣೆಗೆ ಶಿಫ್ಟ್!

ಇತ್ತೀಚಿನ ಮಾಹಿತಿಯ ಪ್ರಕಾರ ವೈದ್ಯಕೀಯ ತಪಾಸಣೆ ಮುಕ್ತಾಯಗೊಂಡಿದ್ದು ಮುನಿರತ್ನ ಅವರನ್ನು ಅಶೋಕ್​​ನಗರ ಠಾಣೆಗೆ ಕರೆತರಲಾಗಿದೆ.

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ ವೈದ್ಯಕೀಯ ತಪಾಸಣೆ ಮುಕ್ತಾಯಗೊಂಡಿದ್ದು ಮುನಿರತ್ನ ಅವರನ್ನು ಅಶೋಕ್​​ನಗರ ಠಾಣೆಗೆ ಕರೆತರಲಾಗಿದೆ.

ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಿ ಬಂಧಿಸಲಾಗಿತ್ತು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು.

ಮುನಿರತ್ನ ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗುತ್ತಿಗೆದಾರ ಚೆಲುವರಾಜು ಅವರು ದಾಖಲಿಸಿದ ಮೊದಲ ಎಫ್‌ಐಆರ್‌ನಲ್ಲಿ, ಶಾಸಕರು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಮತ್ತು ಮೊತ್ತವನ್ನು ಪಾವತಿಸದಿದ್ದರೆ ತನ್ನ ಗುತ್ತಿಗೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿರುವ ಆರೋಪವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT