ಮೃತಪಟ್ಟ ಮಹಿಳೆ ಜಯಲಕ್ಷ್ಮಿ 
ರಾಜ್ಯ

ಬೆಂಗಳೂರು: ಅನೈತಿಕ ಸಂಬಂಧ ವಿಚಾರವಾಗಿ ಜಗಳ, ತಾಯಿಯ ಕತ್ತು ಹಿಸುಕಿ ಕೊಂದ ಮಗಳ ಬಂಧನ

ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ಬಾಡಿಗೆದಾರನೊಂದಿಗಿನ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ತಿಳಿದು ಜಗಳ ಮಾಡಿದ ಹೆತ್ತ ತಾಯಿಯನ್ನೇ ಮಗಳು ಕೊಂದಿರುವ ಘಟನೆ ಹೊಂಗಸಂದ್ರದಲ್ಲಿ ನಡೆದಿದೆ.

ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂಬುದು ಎಂದು ದೃಢಪಟ್ಟಿದೆ.

ಜಯಲಕ್ಷ್ಮಿ ಅವರ ಕಟ್ಟಡದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ಆರೋಪಿ ಹಾಗೂ ಅದೇ ಕಟ್ಟಡದಲ್ಲಿ ಬಾಡಿಗೆದಾರನಾಗಿದ್ದ ಲವಣೇಶ್ ಎಂಬುವರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪವಿತ್ರಾ 11 ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಮದುವೆಯಾಗಿದ್ದು, 10 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾನೆ. ಆದರೆ, ಇತ್ತೀಚೆಗಷ್ಟೇ ಲವಣೇಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ತಾಯಿ ಒಪ್ಪಿರಲಿಲ್ಲ ಎನ್ನಲಾಗಿದೆ.

ಬುಧವಾರ ಮಧ್ಯಾಹ್ನ 3 ಗಂಟೆಗೆ ತನ್ನ ತಾಯಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪವಿತ್ರಾ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಮತ್ತು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಅದನ್ನು ಅಸಹಜ ಸಾವು ಎಂದು ವರ್ಗೀಕರಿಸಿದ್ದರು. ಆದರೆ, ಶುಕ್ರವಾರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.

ಈ ವರದಿಯ ನಂತರ ಪೊಲೀಸರಿಗೆ ಪವಿತ್ರಾಳ ಮೇಲೆ ಅನುಮಾನ ಮೂಡಿದ್ದು, ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧದ ಬಗ್ಗೆ ತಾಯಿ ಪ್ರಶ್ನಿಸಿದಾಗ ಟವೆಲ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಪವಿತ್ರಾ ಮತ್ತು ಲವಣೇಶ್ ಇಬ್ಬರನ್ನೂ ಬಂಧಿಸಲಾಗಿದ್ದು, ಪೊಲೀಸ್ ವಶದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT