ಸಾಂದರ್ಭಿಕ ಚಿತ್ರ  
ರಾಜ್ಯ

ಕೊಪ್ಪಳದಲ್ಲಿ ದಲಿತ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಆರೋಪ: ಮೂವರ ಬಂಧನ

ಹಲ್ಲೆಗೊಳಗಾದ ಯುವಕನನ್ನು ಮಾದಿಗ ಸಮುದಾಯದ ಗುಡ್ಡದಪ್ಪ ಮುಲ್ಲಣ್ಣ ಎಂದು ಗುರುತಿಸಲಾಗಿದೆ.

ಕೊಪ್ಪಳ: ವಿದ್ಯುತ್ ಕಂಬಕ್ಕೆ 21 ವರ್ಷದ ದಲಿತ ಸಮುದಾಯದ ಯುವಕನನ್ನು ಕಟ್ಟಿಹಾಕಿ ಯುವಕರ ಗುಂಪು ಮನಸೋ ಇಚ್ಛೆ ಹಲ್ಲೆ ಮಾಡಿದ ಘಟನೆ ಕೊಪ್ಪಳ ತಾಲ್ಲೂಕಿನ ಬೋಚನಹಳ್ಳಿ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮಾದಿಗ ಸಮುದಾಯದ ಗುಡ್ಡದಪ್ಪ ಮುಲ್ಲಣ್ಣ ಎಂದು ಗುರುತಿಸಲಾಗಿದೆ. ನಂತರ ಯುವಕ ಅಳವಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ವಾಲ್ಮೀಕಿ ಸಮುದಾಯದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಗೆ ಕಾರಣವೇನು?: ಗ್ರಾಮದ ಸಾರ್ವಜನಿಕ ಪ್ರದೇಶದಲ್ಲಿ ನಾನು ಸಿಗರೇಟು ಸೇದಿದ್ದೆ ಎಂದು ಆಕ್ರೋಶದಿಂದ ಯುವಕರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನೀನು ಮಾದಿಗ ಸಮುದಾಯದವನು ಬೇರೆಯವರ ಜೊತೆ ಬೆರೆಯಬಾರದು ಎಂದು ಬೆಳಗ್ಗೆ ಬೈದಿದ್ದರು. ಸಾಯಂಕಾಲ ಎಲೆಕ್ಟ್ರಿಕ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.

ಹೀಗೆ ಯುವಕನಿಗೆ ಬೈದಿದ್ದ ಆರು ಮಂದಿಯಲ್ಲಿ ಮೂವರನ್ನು ಬಂಧಿಸಲಾಗಿದೆ. ಹಲ್ಲೆ ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಯುವಕ ನಾಗನಗೌಡ ಪೊಲೀಸ್ ಪಾಟೀಲ್ ಗುಡ್ಡದಪ್ಪನ ವಿರುದ್ಧ ಪ್ರತಿದೂರು ನೀಡಿದ್ದು, ಗುಡ್ಡದಪ್ಪ ಮತ್ತು ಅವನ ಕುಟುಂಬಸ್ಥರು ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT