ಸಾಂದರ್ಭಿಕ ಚಿತ್ರ  
ರಾಜ್ಯ

ಕೊಪ್ಪಳದಲ್ಲಿ ದಲಿತ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಆರೋಪ: ಮೂವರ ಬಂಧನ

ಹಲ್ಲೆಗೊಳಗಾದ ಯುವಕನನ್ನು ಮಾದಿಗ ಸಮುದಾಯದ ಗುಡ್ಡದಪ್ಪ ಮುಲ್ಲಣ್ಣ ಎಂದು ಗುರುತಿಸಲಾಗಿದೆ.

ಕೊಪ್ಪಳ: ವಿದ್ಯುತ್ ಕಂಬಕ್ಕೆ 21 ವರ್ಷದ ದಲಿತ ಸಮುದಾಯದ ಯುವಕನನ್ನು ಕಟ್ಟಿಹಾಕಿ ಯುವಕರ ಗುಂಪು ಮನಸೋ ಇಚ್ಛೆ ಹಲ್ಲೆ ಮಾಡಿದ ಘಟನೆ ಕೊಪ್ಪಳ ತಾಲ್ಲೂಕಿನ ಬೋಚನಹಳ್ಳಿ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮಾದಿಗ ಸಮುದಾಯದ ಗುಡ್ಡದಪ್ಪ ಮುಲ್ಲಣ್ಣ ಎಂದು ಗುರುತಿಸಲಾಗಿದೆ. ನಂತರ ಯುವಕ ಅಳವಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ವಾಲ್ಮೀಕಿ ಸಮುದಾಯದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಗೆ ಕಾರಣವೇನು?: ಗ್ರಾಮದ ಸಾರ್ವಜನಿಕ ಪ್ರದೇಶದಲ್ಲಿ ನಾನು ಸಿಗರೇಟು ಸೇದಿದ್ದೆ ಎಂದು ಆಕ್ರೋಶದಿಂದ ಯುವಕರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನೀನು ಮಾದಿಗ ಸಮುದಾಯದವನು ಬೇರೆಯವರ ಜೊತೆ ಬೆರೆಯಬಾರದು ಎಂದು ಬೆಳಗ್ಗೆ ಬೈದಿದ್ದರು. ಸಾಯಂಕಾಲ ಎಲೆಕ್ಟ್ರಿಕ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.

ಹೀಗೆ ಯುವಕನಿಗೆ ಬೈದಿದ್ದ ಆರು ಮಂದಿಯಲ್ಲಿ ಮೂವರನ್ನು ಬಂಧಿಸಲಾಗಿದೆ. ಹಲ್ಲೆ ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಯುವಕ ನಾಗನಗೌಡ ಪೊಲೀಸ್ ಪಾಟೀಲ್ ಗುಡ್ಡದಪ್ಪನ ವಿರುದ್ಧ ಪ್ರತಿದೂರು ನೀಡಿದ್ದು, ಗುಡ್ಡದಪ್ಪ ಮತ್ತು ಅವನ ಕುಟುಂಬಸ್ಥರು ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT