ಮುನಿರತ್ನ ಪೊಲೀಸ್​ ವಶಕ್ಕೆ 
ರಾಜ್ಯ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್​ ವಶಕ್ಕೆ

ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ಶನಿವಾರ ಕೋಲಾರದಲ್ಲಿ ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.

ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರ್‌ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಇಂದು ಸಂಜೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ.

ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಲಾಗಿದೆ. ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಮುನಿರತ್ನರನ್ನು ವಶಕ್ಕೆ ಪಡೆದಿರುವ ಕೋಲಾರ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಬೆಂಗಳೂರಿಗೆ ಕರೆತಂದ ಬಳಿಕ ಅವರನ್ನು ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಿದ್ದಾರೆ.

ಮುನಿರತ್ನ ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗುತ್ತಿಗೆದಾರ ಚೆಲುವರಾಜು ಅವರು ದಾಖಲಿಸಿದ ಮೊದಲ ಎಫ್‌ಐಆರ್‌ನಲ್ಲಿ, ಶಾಸಕರು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಮತ್ತು ಮೊತ್ತವನ್ನು ಪಾವತಿಸದಿದ್ದರೆ ತನ್ನ ಗುತ್ತಿಗೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel