ವಸಂತ ನಾಡಿಗೇರ್ ಗೆ ಶ್ರದ್ಧಾಂಜಲಿ 
ರಾಜ್ಯ

ಬೆಂಗಳೂರು: ಕವಿಪವಿ ವತಿಯಿಂದ ಹಿರಿಯ ಪತ್ರಕರ್ತ ದಿ. ವಸಂತ ನಾಡಿಗೇರ್ ಗೆ ಶ್ರದ್ಧಾಂಜಲಿ

ಇಂದು ಮಧ್ಯಾಹ್ನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಆವರಣದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮ ಕ್ಷೇತ್ರದವರು, ವಸಂತ ನಾಡಿಗೇರ ಅವರ ಕುಟುಂಬಸ್ಥರು ಭಾಗವಹಿಸಿದ್ದರು.

ಬೆಂಗಳೂರು: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಅವರಿಗೆ ಕವಿಪವಿವತಿಯಿಂದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಸಹಯೋಗದಲ್ಲಿ ಶನಿವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಇಂದು ಮಧ್ಯಾಹ್ನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಆವರಣದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮ ಕ್ಷೇತ್ರದವರು, ವಸಂತ ನಾಡಿಗೇರ ಅವರ ಕುಟುಂಬಸ್ಥರು ಭಾಗವಹಿಸಿದ್ದರು. ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡ ಆತ್ಮೀಯರು, ವಸಂತ ನಾಡಿಗೇರ ಅವರ ವ್ಯಕ್ತಿತ್ವದ ಗುಣಗಾನ ಮಾಡಿದರು.

ಸಂಯುಕ್ತ ಕರ್ನಾಟಕ ಸಮೂಹ ಸಂಪಾದಕರಾದ ಹುಣಸವಾಡಿ ರಾಜನ್ ಅವರು ಮಾತನಾಡಿ, ವಸಂತ ನಾಡಿಗೇರ ಅವರು ಒಬ್ಬ ಒಳ್ಳೆಯ ಸಜ್ಜನ ವ್ಯಕ್ತಿಯಾಗಿದ್ದರು. ಅವರೊಬ್ಬ ಮಾದರಿ ಸಂಪಾದಕರಾಗಿದ್ದು, ಯಾವುದೇ ವಿಚಾರವನ್ನು ನಿರ್ಧಾಕ್ಷಿಣ್ಯವಾಗಿ, ನಿರ್ಧಿಷ್ಟವಾಗಿ ಹೇಳುವ ವ್ಯಕ್ತಿಯಾಗಿದ್ದರು. ಸಂಪಾದಕ ಅಂದ್ರೆ ಸರ್ವಾಧಿಕಾರಿ ಅಲ್ಲ, ಎಲ್ಲರ ಭಾವನೆಗಳನ್ನು ಕೇಳುವಂತಹ ಕಿವಿ ಇರಬೇಕು. ಆದರೆ ತಮ್ಮದೇ ನಿರ್ಧಾರವನ್ನು ತೆಗೆದುಕೊಳ್ಳುವಂತಹ ವ್ಯಕ್ತಿತ್ವವನ್ನು ಸಂಪಾದಕರು ಹೊಂದಿರಬೇಕು. ವಸಂತ ನಾಡಿಗೇರ ಅಂತಹ ಸಂಪಾದಕರಾಗಿದ್ದರು. ಆದರೆ ಅವರನ್ನು ಕೇವಲ ಹೆಡ್ ಲೈನ್ ಗೆ ಸೀಮಿತ ಗೊಳಿಸುತ್ತಿವುದು ಬೇಜಾರಿನ ಸಂಗತಿ ಎಂದರು.

ಪತ್ರಿಕೋದ್ಯಮದಲ್ಲಿ ಕಂಟೆಂಟ್ ಗೆ ಮನ್ನಣೆ ಇದೆ. ಪತ್ರಿಕೋದ್ಯಮದಲ್ಲಿ ಸುದ್ದಿಗೂ ಮಹತ್ವವಿದೆ. ಸುದ್ದಿ ಬರವಣಿಗೆಯಲ್ಲಿ ಸುಧಾರಣೆ ಆಗಬೇಕು ಎಂಬುದು ಅವರ ಗಮನವಾಗಿತ್ತು. ಶಿರೋನಾಮೆಗಿಂತ ಹೆಚ್ಚಿನ ಜ್ಞಾನ ಅವರಲ್ಲಿತ್ತು ಎಂದು ರಾಜನ್ ಅವರು ನೆನಪಿಸಿಕೊಂಡರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ನಿಸ್ವಾರ್ಥ ಭಾವನೆಯ ವ್ಯಕ್ತಿತ್ವ ಅವರದ್ದಾಗಿತ್ತು. ಅತ್ಯಂತ ಸೂಕ್ಷ್ಮ ಮನಸ್ಸಿನ ವ್ಯಕ್ತಯಾಗಿದ್ದು, ಸಣ್ಣ ಸಣ್ಣ ವಿಷಯಗಳಿಗೂ ಕೂಡ ಹೆಚ್ಚು ಗಮನ ಕೊಡುತ್ತಿದ್ದರು. ಎರಡು ವರಷಗಳ ಹಿಂದೆ ಮೈಸುರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ದತ್ತಿನಿಧಿ ಪ್ರಶಸ್ತಿ ಕೊಡುತ್ತೇವೆ ಎಂದಾಗ ಬೇಡ ಎಂದಿದ್ದರು. ಕೊನೆಗೆ ಅವರನ್ನು ಒಪ್ಪಿಸಿ ಸನ್ಮಾನಿಸಿದ್ದೇವು. ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಿಗದಿರುವುದು ಅತ್ಯಂತ ನೋವಿನ ಸಂಗತಿ ಎಂದರು.

ಪ್ರಜಾವಾಣಿ ಸಂಪಾದಕ ರವೀಂದ್ರ ಭಟ್ ಅವರು ಮಾತನಾಡಿ, ವಸಂತ ಅವರ ವ್ಯಕ್ತಿತ್ವದ ಕುರಿತು ಸೊಶಿಯಲ್ ಮಿಡಿಯಾದಲ್ಲಿ ಬಂದಿದ್ದನ್ನು ನೋಡಿದ ಮೇಲೆ, ನಾವು ಯಾವದೇ ಪತ್ರಕರ್ತ ಬದುಕಿದ್ದಾಗಲೇ ಅವರ ಬಗ್ಗೆ ಬರೆಯುವಂತಹ ವಾತಾರವಣವನ್ನು ಪತ್ರಿಕಾ ಸಂಘಟನೆಗಳ ಮೂಲಕ ಮಾಡಬೇಕು. ಯಾವುದೇ ಪತ್ರಕರ್ತ ತೀರಿದ ಮೇಲೆ ಅವರನ್ನು ಗುರುತಿಸುವುದು ಸರಿಯಲ್ಲ. ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಿಕ್ಕಿಲ್ಲ ಎಂದು ಬೇಸರ ಪಟ್ಟುಕೊಳ್ಳುವುದಕ್ಕಿಂತ, ಈಗ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಬಂದಿರುವುದನ್ನು ನೋಡಿದರೆ ಅದಕ್ಕಿಂತ ದೊಡ್ಡ ಗೌರವ ಬೇರಿಲ್ಲ ಎಂದರು.

ವಸಂತ ನಾಡಿಗೇರ್ ಗೆ ಶ್ರದ್ಧಾಂಜಲಿ

ವಸಂತ ನಾಡಿಗೇರ ಅವರ ಹಿರಿಯ ಸಹೋದರ ವಿನಾಯಕ ನಾಡಿಗೇರ ಅವರು ಮಾತನಾಡಿ, ನಾವು ಅಣ್ಣತಮ್ಮಂದಿರಾಗಿದ್ದರೂ ಸ್ನೇಹಿತರಂತೆ ಇದ್ದೆವು. ನಾನು ಧಾರವಾಡ ಕವಿವಿಗೆ ಹೋದೆ, ಆಗತಾನೇ ಪತ್ರಿಕೋದ್ಯಮ ಹೊಸ ಕೋರ್ಸ್ ಶುರುವಾಗಿದೆ. ಅದಕ್ಕೆ ಸೇರಿಕೊಳ್ಳು ಅಂತಾ ಹೇಳಿದ್ದೆ. ಅದರಂತೆ ಅವನು ಸೇರಿಕೊಂಡ. ಅದಾದ ಮೇಲೆ ಅವನಾಗಯೇ ಬೆಳೆದ. ನಾನೇನೂ ಹೆಚ್ಚಿನದನ್ನು ಅವನಿಗೆ ಮಾಡಿಲ್ಲ. ವಸಂತ ಹಾಗೂ ನಾಡಿಗೇರ ಕುಟುಂಬದಿಂದ ಚಿರರುಣಿ ಎಂದರು.

ವಸಂತ ನಾಡಿಗೇರ ಅವರ ಪತ್ನಿ ನಂದಾ ನಾಡಿಗೇರ ಭಾವುಕರಾಗಿ ಮಾತನಾಡಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್, ಕವಿಪವಿ ಅಧ್ಯಕ್ಷ ಪ್ರವೀಣ್ ಶಿರಿಯಣ್ಣವರ್, ಉಪಾಧ್ಯಕ್ಷ ಲಿಂಗರಾಜ್ ಬಡಿಗೇರ್, ಪ್ರಧಾನ ಕಾರ್ಯದರ್ಶಿ ಅನಿಲ್ ಬಾಸೂರ ಸೇರಿದಂತೆ ಹಲವರು ಭಾಗವಹಿಸಿದ್ದರು. ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನಿರೂಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT