ಗೃಹ ಸಚಿವ ಪರಮೇಶ್ವರ್ 
ರಾಜ್ಯ

ನಾಗಮಂಗಲದಲ್ಲಿ ಪರಿಸ್ಥಿತಿ ಈಗ ಶಾಂತವಾಗಿದೆ: ಗೃಹ ಸಚಿವ ಪರಮೇಶ್ವರ

ನಾಗಮಂಗಲದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಸಮಸ್ಯೆ ಇಲ್ಲ, ಶಾಂತಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಬೆಂಗಳೂರು: ಹಿಂಸಾಚಾರ ಪೀಡಿತ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಕಳೆದ ಬುಧವಾರ ರಾತ್ರಿ ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆಸಿ ಹಲವು ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

ನಾಗಮಂಗಲದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಸಮಸ್ಯೆ ಇಲ್ಲ, ಶಾಂತಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪರಮೇಶ್ವರ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಸುಮಾರು 55 ಜನರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಫ್‌ಐಆರ್‌ ಬಗ್ಗೆ ಜೆಡಿಎಸ್‌ ನಾಯಕ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ವಿರೋಧ ಪಕ್ಷಗಳು ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಪೊಲೀಸರು ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದರು.

ಇನ್ನು ಬಿಜೆಪಿಯವರು ನಾಗಮಂಗಲಕ್ಕೆ ಸತ್ಯಶೋಧನಾ ತಂಡ ಕಳುಹಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ‘ಅವರು ಸತ್ಯಾಂಶವನ್ನು ಕಂಡುಹಿಡಿದು ನಮಗೆ ತಿಳಿಸಲಿ. ಅವರ ಸತ್ಯಶೋಧನೆಯಿಂದ ಏನಾದರೂ ಸತ್ಯಾಂಶ ಹೊರಬಂದರೆ ನಾವು ಪರಿಶೀಲಿಸುತ್ತೇವೆ. ಇದು ನಮ್ಮ ಕೆಲಸವನ್ನು ಸ್ವಲ್ಪಮಟ್ಟಿಗೆ ಸುಲಭ ಮಾಡುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT