ಸಗೀರ್ ಅಹ್ಮದ್ 
ರಾಜ್ಯ

ಚಿಕ್ಕಮಗಳೂರು: ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹ್ಮದ್ ಪತ್ನಿಯ ಹೆಸರಲ್ಲಿದ್ದ 32 ಎಕರೆ ಭೂಮಿ ಸರ್ಕಾರದ ವಶಕ್ಕೆ!

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನ ಶೋಲಾ ಅರಣ್ಯದಲ್ಲಿ ಸಗೀರ್ ಅಹ್ಮದ್ ಪತ್ನಿ ಫಾತಿಮಾಭಿ ಹೆಸರನಲ್ಲಿದ್ದ 32.21 ಎಕರೆ ಭೂಮಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ.

ಚಿಕ್ಕಮಗಳೂರು: ಅಕ್ರಮವಾಗಿ ಖರೀದಿಸಿದ್ದ 32 ಎಕರೆ ಜಮೀನನ್ನು ವಶಕ್ಕೆ ಪಡೆಯುವ ಮೂಲಕ ಕಾಂಗ್ರೆಸ್‌ನ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬಕ್ಕೆ ಸರ್ಕಾರ ಬಿಗ್ ಶಾಕ್​ ನೀಡಿದೆ.

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನ ಶೋಲಾ ಅರಣ್ಯದಲ್ಲಿ ಸಗೀರ್ ಅಹ್ಮದ್ ಪತ್ನಿ ಫಾತಿಮಾಭಿ ಹೆಸರನಲ್ಲಿದ್ದ 32.21 ಎಕರೆ ಭೂಮಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು, ಆಸ್ತಿಯ ಮೇಲಿದ್ದ ಸಗೀರ್ ಕುಟುಂಬದ ಹಕ್ಕನ್ನು ರದ್ದುಪಡಿಸಿ, ಸರ್ಕಾರಿ ಜಮೀನು ಎಂದು ಆದೇಶ ಹೊರಡಿಸಿದ್ದಾರೆ.

ಇನಾಂ ದತ್ತಾತ್ರೇಯ ಪೀಠ ಗ್ರಾಮದ ಸರ್ವೆ ನಂಬರ್ 5ರಲ್ಲಿ ಫಾತಿಮಾಭಿ ಅವರ ಹೆಸರಿನಲ್ಲಿದ್ದ ಬಂಡಿದಾರಿ, ಕಾಲುದಾರಿ ಮೇಲಿನ ಹಕ್ಕನ್ನು ಜಿಲ್ಲಾಡಳಿತ ರದ್ದು ಮಾಡಿದೆ. ಈ ಜಮೀನು ಬೇರೆಯವರಿಗೆ ಮಂಜೂರಾಗಿತ್ತು. ಆದರೆ 1978ರಲ್ಲಿ ಸಗೀರ್ ತಮ್ಮ ಪತ್ನಿ ಫಾತಿಮಾಭಿ ಹೆಸರಿನಲ್ಲಿ ಅಕ್ರಮವಾಗಿ ಖರೀದಿಸಲಾದ್ದರು. ಆದರೆ ಈ ಮಂಜೂರಾತಿಯೇ ಅಕ್ರಮ ಎಂದು ಜಿಲ್ಲಾಡಳಿತ ಘೋಷಿಸಿದೆ. ಅಲ್ಲದೆ ಭೂಮಿ‌ ವಶಪಡಿಸಿಕೊಂಡಿರುವುದಾಗಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದ ಬಳಿಯಿರುವ ಸಗೀರ್ ಅಹ್ಮದ್ ಮನೆಯ ಬಾಗಿಲಿಗೆ ಜಿಲ್ಲಾಡಳಿತ ನೋಟಿಸ್ ಅಂಟಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT