ರಾಜ್ಯ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಚಾರಿತ್ರಿಕ ಮಾನವ ಸರಪಳಿ; ಸಿಎಂ ಸಿದ್ದರಾಮಯ್ಯ ಚಾಲನೆ

ಬೀದರ್ ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳನ್ನೊಳಗೊಂಡ 2,500 ಕಿ.ಮೀ ಉದ್ದದ ಮಾನವ ಸರಪಳಿಯನ್ನು ನಾಗರಿಕ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ ಸರ್ಕಾರದಿಂದ ಆಯೋಜಿಸಲಾಗಿದೆ.

ಬೆಂಗಳೂರು: ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಮಾನತೆ, ಐಕ್ಯತೆ, ಸಾಮರಸ್ಯ, ಸಾಮಾಜಿಕ ನ್ಯಾಯವನ್ನು ಬಿಂಬಿಸುವ ಐತಿಹಾಸಿಕ ಜಗತ್ತಿನ ಅತಿ ಉದ್ದದ ಮಾನವ ಸರಪಳಿ ರಚನೆ ಮೂಲಕ ದಾಖಲೆ ಸೃಷ್ಟಿಸಲಾಯಿತು.

ಬೀದರ್ ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳನ್ನೊಳಗೊಂಡ 2,500 ಕಿ.ಮೀ ಉದ್ದದ ಮಾನವ ಸರಪಳಿಯನ್ನು ವಿವಿಧ ನಾಗರಿಕ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ ಸರ್ಕಾರದಿಂದ ಆಯೋಜಿಸಲಾಗಿತ್ತು.

ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ, ಸಭಾಪತಿ ಬಸವರಾಜ ಹೊರಟ್ಟಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ.

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದು ಕರೆ ನೀಡಿದರು.

ಏಕತೆ ಭಜನೆ ಮಾಡುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು. ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರಿಗೆ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ. ಈ ಬಿಜೆಪಿ ಮತ್ತು ಇವರ ಜೊತೆಗಿರುವ ವಿಚ್ಚಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು.20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಬ್ಬ, ಪೌರ ಕಾರ್ಮಿಕರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಇಲ್ಲಿ ಹಾಜರಿದ್ದು, ಈ ದಿನದ ಮೆರುಗು ಹೆಚ್ಚಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿದೆ.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ ಮತ್ತಿತರರು ಮಾನವ ಸರಪಳಿಗೆ ಕೈ ಜೋಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT