ಶಿವುಪುರ-ಗೋನಾಳ್ ಗ್ರಾಮಗಳ ಗ್ರಾಮಸ್ಥರು. 
ರಾಜ್ಯ

ಬೇಡಿಕೆಗಳಿಗೆ ಕಿವಿಗೊಡದ ಸರ್ಕಾರ: ತೆಲಂಗಾಣ ರಾಜ್ಯಕ್ಕೆ ಶಿವುಪುರ-ಗೋನಾಳ್ ಗ್ರಾಮಗಳ ವಿಲೀನಗೊಳಿಸುವಂತೆ ಆಗ್ರಹ

ನಿವೇಶನದ ಹಕ್ಕು ಪತ್ರಗಳ (ಪಹಣಿ) ಸಮಸ್ಯೆ ಪರಿಹರಿಸುವಂತೆ ಕಳೆದ 65 ವರ್ಷಗಳಿಂದ ಜಿಲ್ಲಾಡಳಿತಕ್ಕೆ 825 ಬಾರಿ ಮನವಿ ಪತ್ರ ಸಲ್ಲಿಸಿದ್ದರೂ, ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಯಾದಗಿರಿ/ಕಲಬುರಗಿ: ತಮ್ಮ ಬೇಡಿಕೆಗಳಿಗೆ ಸರ್ಕಾರ ಕಿವಿಗೊಡದ ಕಾರಣ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಶಿವಾಪುರ ಮತ್ತು ಗೋನಾಳ್‌ ಗ್ರಾಮಗಳನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಿವೇಶನದ ಹಕ್ಕು ಪತ್ರಗಳ (ಪಹಣಿ) ಸಮಸ್ಯೆ ಪರಿಹರಿಸುವಂತೆ ಕಳೆದ 65 ವರ್ಷಗಳಿಂದ ಜಿಲ್ಲಾಡಳಿತಕ್ಕೆ 825 ಬಾರಿ ಮನವಿ ಪತ್ರ ಸಲ್ಲಿಸಿದ್ದರೂ, ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಎರಡು ಗ್ರಾಮಗಳ 850ಕ್ಕೂ ಹೆಚ್ಚು ರೈತರಿಗೆ ಸೇರಿದ 10 ಸಾವಿರ ಎಕರೆಗೂ ಹೆಚ್ಚು ಜಮೀನಿಗೆ ಹಕ್ಕು ಪತ್ರ ನೀಡಿಲ್ಲ. ದಾಖಲೆಗಳಿಲ್ಲದ ಕಾರಣ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ನಮ್ಮ ಗ್ರಾಮಗಳಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ತೆಲಂಗಾಣದ ಕೃಷ್ಣಾ ಗ್ರಾಮದ ರೈತರಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದೇ ವೇಳೆ ಗ್ರಾಮಗಳಿಗೆ ವಿಶೇಷ ಅಧಿಕಾರಿಯಾಗಿರುವ ಯಾದಗಿರಿಯ ಸಹಾಯಕ ಆಯುಕ್ತರನ್ನು ಹಾಗೂ ತಹಶೀಲ್ದಾರ್ ರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ವಿಫಲವಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಬೆದರಿಕೆ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT