ಶಿವುಪುರ-ಗೋನಾಳ್ ಗ್ರಾಮಗಳ ಗ್ರಾಮಸ್ಥರು. 
ರಾಜ್ಯ

ಬೇಡಿಕೆಗಳಿಗೆ ಕಿವಿಗೊಡದ ಸರ್ಕಾರ: ತೆಲಂಗಾಣ ರಾಜ್ಯಕ್ಕೆ ಶಿವುಪುರ-ಗೋನಾಳ್ ಗ್ರಾಮಗಳ ವಿಲೀನಗೊಳಿಸುವಂತೆ ಆಗ್ರಹ

ನಿವೇಶನದ ಹಕ್ಕು ಪತ್ರಗಳ (ಪಹಣಿ) ಸಮಸ್ಯೆ ಪರಿಹರಿಸುವಂತೆ ಕಳೆದ 65 ವರ್ಷಗಳಿಂದ ಜಿಲ್ಲಾಡಳಿತಕ್ಕೆ 825 ಬಾರಿ ಮನವಿ ಪತ್ರ ಸಲ್ಲಿಸಿದ್ದರೂ, ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಯಾದಗಿರಿ/ಕಲಬುರಗಿ: ತಮ್ಮ ಬೇಡಿಕೆಗಳಿಗೆ ಸರ್ಕಾರ ಕಿವಿಗೊಡದ ಕಾರಣ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಶಿವಾಪುರ ಮತ್ತು ಗೋನಾಳ್‌ ಗ್ರಾಮಗಳನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಿವೇಶನದ ಹಕ್ಕು ಪತ್ರಗಳ (ಪಹಣಿ) ಸಮಸ್ಯೆ ಪರಿಹರಿಸುವಂತೆ ಕಳೆದ 65 ವರ್ಷಗಳಿಂದ ಜಿಲ್ಲಾಡಳಿತಕ್ಕೆ 825 ಬಾರಿ ಮನವಿ ಪತ್ರ ಸಲ್ಲಿಸಿದ್ದರೂ, ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಎರಡು ಗ್ರಾಮಗಳ 850ಕ್ಕೂ ಹೆಚ್ಚು ರೈತರಿಗೆ ಸೇರಿದ 10 ಸಾವಿರ ಎಕರೆಗೂ ಹೆಚ್ಚು ಜಮೀನಿಗೆ ಹಕ್ಕು ಪತ್ರ ನೀಡಿಲ್ಲ. ದಾಖಲೆಗಳಿಲ್ಲದ ಕಾರಣ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ನಮ್ಮ ಗ್ರಾಮಗಳಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ತೆಲಂಗಾಣದ ಕೃಷ್ಣಾ ಗ್ರಾಮದ ರೈತರಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದೇ ವೇಳೆ ಗ್ರಾಮಗಳಿಗೆ ವಿಶೇಷ ಅಧಿಕಾರಿಯಾಗಿರುವ ಯಾದಗಿರಿಯ ಸಹಾಯಕ ಆಯುಕ್ತರನ್ನು ಹಾಗೂ ತಹಶೀಲ್ದಾರ್ ರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ವಿಫಲವಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಬೆದರಿಕೆ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಖಮೇನಿ ಹತ್ಯೆ ಕುರಿತು ಪೋಸ್ಟ್‌: ಎನ್‌ಸಿ ಸಂಸದ, ಶ್ರೀನಗರ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್ ದಾಖಲು

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ; Rukmini Vasanth ಬೆಂಬಲ!

SCROLL FOR NEXT