ರಷ್ಯಾದಿಂದ ಶುಕ್ರವಾರ ಕಲಬುರಗಿಗೆ ಮರಳಿದ ಯುವಕರನ್ನು ಭಾನುವಾರ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್​ ಅವರು ಸನ್ಮಾನಿಸಿದರು. 
ರಾಜ್ಯ

ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಲಬುರಗಿಯ 3 ಯುವಕರು ತವರಿಗೆ ವಾಪಸ್..!

ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಬಾದ್ ಕಾಲೊನಿ ನಿವಾಸಿ ಸಮೀರ್ ಅಹ್ಮದ್, ಮಿಜಗುರಿ ಪ್ರದೇಶದ ಅಬ್ದುಲ್ ನಯೀಮ್ ವಾಪಸ್ ಆದವರು.

ಕಲಬುರಗಿ: ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಕಲಬುರಗಿಯ ಮೂವರು ಯುವಕರು ಭಾನುವಾರ ತವರಿಗೆ ವಾಪಸ್ ಆಗಿದ್ದಾರೆ.

ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಬಾದ್ ಕಾಲೊನಿ ನಿವಾಸಿ ಸಮೀರ್ ಅಹ್ಮದ್, ಮಿಜಗುರಿ ಪ್ರದೇಶದ ಅಬ್ದುಲ್ ನಯೀಮ್ ವಾಪಸ್ ಆದವರು.

ರಷ್ಯಾಗೆ ಉದ್ಯೋಗ ಅರಸಿ 2023ರ ಡಿಸೆಂಬರ್​ ತಿಂಗಳಲ್ಲಿ ಕಲಬುರಗಿಯ ಈ ಯುವಕರು ತೆರಳಿದ್ದರು. ಮುಂಬೈ ಮೂಲದ ಬಾಬಾ ಜಾಬ್ ಸೆಕ್ಯೂರಿಟಿ ಏಜೆನ್ಸಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು, ರಷ್ಯಾದಲ್ಲಿ ಸೆಕ್ಯೂರಿಟಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ಯುವಕರು ರಷ್ಯಾಕ್ಕೆ ತೆರಳಿದ್ದರು.

ಆದರೆ, ಅಲ್ಲಿ ಉಕ್ರೇನ್ ಮತ್ತು ರಷ್ಯಾ ಮಧ್ಯೆ ಯುದ್ಧ ಶುರುವಾದ ಬಳಿಕ ರಷ್ಯಾ ಸೇನೆ ಈ ಯುವಕರನ್ನು ಯುದ್ದದಲ್ಲಿ ಬಳಸಿಕೊಳ್ಳಲು ಸೂಚಿಸಿತ್ತು. ಬಂಕರ್‌ಗಳನ್ನು ಅಗೆಯುವ ಕೆಲಸಕ್ಕೆ ಇವರನ್ನು ನಿಯೋಜಿಸಲಾಗಿತ್ತು. ಇದರಿಂದ ಬೇಸತ್ತ ಯುವಕರು, ರಷ್ಯಾದಲ್ಲಿ ತಮಗೆ ನೀಡಿರುವ ಕೆಲಸದ ಕುರಿತು ವಿಡಿಯೋ ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದರು‌. ಇದನ್ನು ಗಮನಿಸಿ ಯುವಕರನ್ನು ಮರಳಿ ತರುವಂತೆ ಕೇಂದ್ರ ಸರಕಾರಕ್ಕೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡಾ ಪತ್ರ ಬರೆದು ಒತ್ತಾಯಿಸಿದ್ದರು.

ಬಳಿಕ ಪ್ರಧಾನಿ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿ, ವಾಪಸ್ ಆದ ಕೆಲವೇ ದಿನಗಳಲ್ಲಿ ಮೂವರು ಯುವಕರು ಮರಳಿ ತವರಿಗೆ ಮರಳಿದ್ದಾರೆ.

ಕಲಬುರಗಿ ಜಿಲ್ಲೆಯ ಮದ್ಬೂಲ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿರುವ ಸೈಯದ್ ನವಾಜ್ ಅಲಿ ಅವರು ಮಾತನಾಡಿ, ತಮ್ಮ ಮಗ ಸೈಯದ್ ಇಲಿಯಾಸ್ ಹುಸೇನಿ ತನ್ನ ಗೆಳೆಯರೊಂದಿಗೆ ವಾಪಸ್ಸಾಗಿದ್ದಾನೆಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಅವರು, ನಕಲಿ ಜಾಬ್​ ಏಜೆನ್ಸಿಗಳು ಯುವಕರನ್ನು ಮರಳು ಮಾಡಿ ಹೆಚ್ಚಾಗಿ ಮೋಸ ಮಾಡುತ್ತಿವೆ. ಯುವಕರು ಆಲೋಚಿಸದೆ ಈ ಏಜೆನ್ಸಿಗಳಿಗೆ ಬಲಿ ಆಗಬಾರದು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT